ಸುಂದರವಾದ ಹೆಣ್ಣುಮಕ್ಕಳ ಅಂಗಾಗಳನ್ನು ಕಿತ್ತು ತಿಂತಾರೆ: ಕೋಡಿಮಠದ ಶ್ರೀಗಳ ಭಯಾನಕ ಭವಿಷ್ಯ! | JANATA NEWS
ಹಾಸನ : ಹಾಸನದ ಕೋಡಿಮಠದಲ್ಲಿ ಮಾತನಾಡಿದ ಅವರು ಮಲೆನಾಡು ಹೋಗಿ ಬಯಲಾಗುತ್ತದೆ, ಬಯಲು ಹೋಗಿ ಮಲೆನಾಡಾಗುತ್ತದೆ.
ಈ ವರ್ಷದ ಫಲಾಫಲದ ಬಗ್ಗೆ ಮಾತನಾಡಿದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ. ಇದರಿಂದ ಜಗತ್ತಿನ ಸಾಮ್ರಾಟರೆಲ್ಲರೂ ತಲ್ಲಣಗೊಳ್ಳುತ್ತಾರೆಂದು ಹೇಳಿದರು.
ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ. ಈ ವರ್ಷ ಮಳೆ, ಕಂಡಮಂಡಲ, ಮುಂಗಾರು ಚೆನ್ನಾಗಿ ಆಗುತ್ತದೆ. ಆದರೆ, ಹಿಂಗಾರು ಸ್ವಲ್ಪ ಕಡಿಮೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಅಶಾಂತಿ, ಮತೀಯಗಲಭೆ, ದೊಂಬಿಗಳು, ಸಾವು-ನೋವುಗಳು ಕೊಲೆಗಳಾಗುತ್ತವೆ. ಅದರಲ್ಲೂ ವಿಶೇಷವಾಗಿ ವಿದ್ಯುತ್ ಅಪಾಯಗಳು ಹೆಚ್ಚು ಸಂಭವಿಸಲಿವೆ ಎಂದು ಅವರು ಹೇಳಿದ್ದಾರೆ.
ಸುಂದರವಾದ ಹೆಣ್ಣುಮಕ್ಕಳ ಅಂಗಾಗಳನ್ನು ಕಿತ್ತು ತಿನ್ನುತಾರೆ. ರಾಜಕೀಯ ವಿಪಲ್ಲವಾಗುತ್ತೆ, ರಾಜಕೀಯ ಗುಂಪುಗಳಾಗುತ್ತವೆ. ಬೆಂಕಿಯ ಅನಾಹುತ ಜಾಸ್ತಿ, ಗಾಳಿ, ಸಿಡಿಲು, ಗುಡುಗು ವಿಪರೀತ. ಇಲ್ಲಿಯತನಕ ಕಂಡು ಕೇಳರಿಯದ ಬಹುದೊಡ್ಡ ಅಘಾತ ಭಾರತದಲ್ಲಿ ಆಗುತ್ತದೆ ಎಂದು ಸ್ವಾಮೀಜಿಗಳು ನುಡಿದಿದ್ದಾರೆ.