ಯುವತಿಗೆ ಆಯಸಿಡ್ ಎರಚಿ ವಿಕೃತಿ ಮೆರೆದಿದ್ದ ಆರೋಪಿ, ಖಾವಿ ಧರಿಸಿ ಧ್ಯಾನ! | JANATA NEWS
ಬೆಂಗಳೂರು : ಕಳೆದ ತಿಂಗಳು ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದ ಆರೋಪಿ ನಾಗೇಶ್ ನನ್ನ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಖಾವಿ ಧರಿಸಿ ಧ್ಯಾನ ಮಾಡುತ್ತಿದ್ದ. 16 ದಿನಗಳ ಬಳಿಕ ನಿರಂತರ ಶೋಧದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆಯ ಬಳಿಕ ಆರೋಪಿ ತಿರುವಣ್ಣಾಮಲೈ ನ ದೇವಸ್ಥಾನದಲ್ಲಿ ಅನುಮಾನ ಬರಬಾರದೆಂದು ಖಾವಿ ಧರಿಸಿ ಕುಳಿತಿದ್ದ. ಆರೋಪಿ ಸಿಕ್ಕಿಬಿದ್ದಿದ್ದು, ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ 23 ವರ್ಷದ ಯುವತಿ ಮೇಲೆ ನಾಗೇಶ್ ಎಂಬಾತ ಆಯಸಿಡ್ ಅಟ್ಯಾಕ್ ಮಾಡಿ ಪರಾರಿಯಾಗಿದ್ದ.
English summary :Arrest is the man who had cast acid on the young woman