ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನ! | JANATA NEWS
ಬೆಂಗಳೂರು : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅವರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದಾಳೆ.
ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಶನಿವಾರ ತಡರಾತ್ರಿ ನಿಧನ ಹೊಂದಿದ್ದಾಳೆ. ಜಿಡಿ ಹರೀಶ್ ಗೌಡ ಪುತ್ರಿಯಾಗಿರುವ ಗೌರಿ ಕಳೆದ 6 ತಿಂಗಳಿನಿಂದ ಬೋನ್ ಕ್ಯಾನ್ಸರ್ನಿಂದ ಬಳಲುತ್ತಿದ್ದಳು.
ಮಾಜಿ ಸಚಿವ ಜಿ. ಟಿ. ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಮಗು ಗೌರಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮಗುವಿನ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ.ಟಿ ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಶಾಸಕರಾದ ಜಿ.ಟಿ ದೇವೇಗೌಡ ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ ಎಂದು ಡಿಕೆಎಸ್ ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
— Siddaramaiah (@siddaramaiah) May 15, 2022
1/2 pic.twitter.com/ro3krVv6MA
ಶಾಸಕರಾದ ಶ್ರೀ @GTDevegowda ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ.
— DK Shivakumar (@DKShivakumar) May 15, 2022
ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ. pic.twitter.com/ap23rgcmsR
ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಗೌರಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬದವರಿಗೆ ದೈರ್ಯ ತುಂಬಿದೆ.. pic.twitter.com/vIC4IOJDG8
— Nikhil Kumar (@Nikhil_Kumar_k) May 15, 2022