ಕೊಲ್ಹಾಪುರ-ಹುಬ್ಬಳ್ಳಿ ರಸ್ತೆಯ ಸಾವಿನ ಹೆದ್ದಾರಿ ಆಗಿದೆ | JANATA NEWS
ಬೆಂಗಳೂರು : ಹುಬ್ಬಳ್ಳಿ ಹೊರ ವಲಯದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಶಾಂತಿ ಸಿಗಲಿ ಮತ್ತು ಅವರ ಕುಟುಂಬಗಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಅಪಘಾತ ಸಂಭವಿಸಿದ ಕೊಲ್ಲಾಪುರ-ಹುಬ್ಬಳ್ಳಿ ಹೆದ್ದಾರಿಯ ಪ್ರದೇಶದಲ್ಲಿ ಆಗಾಗ್ಗೆ ದುರಂತಗಳು ನಡೆಯುತ್ತಿವೆ, ಇದನ್ನು ಜನರು 'ಸಾವಿನ ಹೆದ್ದಾರಿ' ಎಂದು ಹೇಳುತ್ತಾರೆ ಎಂದು ಕುಮಾರಸ್ವಾಮಿ ಎಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಮತ್ತೆಅಪಘಾತಗಳು ಸಂಭವಿಸದಂತೆ ತಡೆಯಬೇಕು.
RELATED TOPICS:
English summary :The Kolhapur-Hubli road is a highway of death