ಮತ್ತೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | JANATA NEWS
ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದ್ದು, ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದ್ದರೂ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 12 ವಿದ್ಯಾರ್ಥಿನಿಯರು ಇಂದೂ ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.
ಕಳೆದ ಶನಿವಾರವೂ ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಆದರೆ ಇಂದೂ ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ.
ಹಿಜಾಬ್ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎನ್ನುವುದಾಗಿ ತಿಳಿದುಬಂದಿದೆ.