ರಾಜ್ಯದ 47.86 ಲಕ್ಷ ರೈತರಿಗೆ ಸಿಎಂ ಕಿಸಾನ್ ಯೋಜನೆ 956.71 ಕೋಟಿ ಬಿಡುಗಡೆ | JANATA NEWS
ಬೆಂಗಳೂರು : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಖಾತೆಗಳನ್ನು ಸಹಾಯಧನವನ್ನು ಮುಖ್ಯಮಂತ್ರಿ ವರ್ಗಾಯಿಸಿದ್ದರು. 2018-19ರಿಂದ 2021-22ರವರೆಗೆ ಭಾರತದ ಸರ್ಕಾರದಿಂದ ಅನುಮೋದಿಸಲ್ಪಟ್ಟ ರಾಜ್ಯದ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂಪಾಯಿ ಪಾವತಿಯಾದಂತಾಗಿದೆ. 2021-22ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975. 12 ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ಆಧಾರ್ ಗುರುತಿನ ಸಂಖ್ಯೆಯಾಧಾರದ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗವಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.