ಪಿಎಸ್ಐ ಪರೀಕ್ಷಾ ನೇಮಕಾತಿ ಪ್ರಕರಣ: ಮತ್ತಿಬ್ಬರು ಪೊಲೀಸ್ ಪೇದೆಗಳನ್ನು ಬಂಧಿಸಿದ ಸಿಐಡಿ | JANATA NEWS
ಬೆಂಗಳೂರು : ಹಗರಣದಲ್ಲಿ ಶಾಮೀಲಾಗಿದ್ದ ಆರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರು ಆಭ್ಯರ್ಥಿಗಳನ್ನು ಬಂಧಿಸಿದ್ದಾರೆ.
ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ಕುಮಾರ್ ಮತ್ತು ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯ ಪೇದೆ ಹರೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೋಹನ್ ಕುಮಾರ್ ಕೂಡ ಪಿಎಸ್ಐ ಪರೀಕ್ಷೆಯಲ್ಲಿ ಪಾಸ್ ಆಗಿದ್ದ. ಅನುಮಾನ ಬಂದು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದಾಗ ಮೋಹನ್ ನೀಡಿದ್ದ ಕಾರ್ಬನ್ ಶೀಟ್ ಮತ್ತು ಒರಿಜಿನಲ್ ಕಾಪಿಗೂ ವ್ಯತ್ಯಾಸ ಕಂಡು ಬಂದಿತ್ತು. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೋಹನ್ ಕುಮಾರ್ನನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹರೀಶ್ ಪಿಎಸ್ಐ ಹುದ್ದೆಗಾಗಿ ಹರೀಶ್ 50 ಲಕ್ಷ ರೂ.ಗೆ ಇಬ್ಬರು ವ್ಯಕ್ತಿಗಳ ಮೂಲಕ ಡೀಲ್ ಮಾಡಿಕೊಂಡಿದ್ದ. ಈ ಪೈಕಿ 30 ಲಕ್ಷ ಹಣ ನೀಡಿ ಒಎಂಆರ್ ಶೀಟ್ ತಿದ್ದಲು ಹಣ ನೀಡಿದ್ದ. ಎಕ್ಸಾಂ ವೇಳೆ ಉತ್ತರ ಪತ್ರಿಕೆಯಲ್ಲಿ ಖಾಲಿ ಬಿಟ್ಟು ಬಂದಿದ್ದ. ಅನುಮಾನದ ಮೇಲೆ ಸಿಐಡಿ ಅಧಿಕಾರಿಗಳು ಹರೀಶ್ನನ್ನ ವಿಚಾರಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.