ರಾಯಚೂರಲ್ಲಿ ಕಲುಷಿತ ನೀರು ಸರಬರಾಜು, ಸಾವಿನ ಸಂಖ್ಯೆ 6ಕ್ಕೆ ಏರಿಕೆ! | JANATA NEWS
ರಾಯಚೂರು : ನಗರದಲ್ಲಿ ಕಲುಷಿತ ನೀರಿಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ನಗರಸಭೆ ಸರಬರಾಜು ಮಾಡಿದ್ದ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ.
ಪೇಟೆ ವಾರ್ಡ್ ಸಂಖ್ಯೆ 12ರ ನಿವಾಸಿ ನಯಿಮುದ್ದೀನ್(55) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಾಂತಿ ಭೇದಿಯಿಂದ ಖಾಸಗಿ ಆಸ್ಪತ್ರೆಯಲ್ಲಿ 10 ದಿನಗಳಿಂದ ನಯಿಮುದ್ದೀನ್ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ನಗರದಲ್ಲಿ ಕಲುಷಿತ ನೀರಿನಿಂದಾಗಿ ಮೃತರ ಸಂಖ್ಯೆ ಆರಕ್ಕೆ ಏರಿದೆ.
RELATED TOPICS:
English summary :Polluted water supply, death toll rises to 6 in Raichur