Sat,Apr27,2024
ಕನ್ನಡ / English

ಸೋಮವಾರ ಬೆಂಗಳೂರಿಗೆ ಮೋದಿ: ಮೋದಿ ಓಡಾಡುವ ರಸ್ತೆಗಳ ಈ ಶಾಲೆ, ಕಾಲೇಜುಗಳಿಗೆ ರಜೆ | JANATA NEWS

19 Jun 2022
4000

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನಾಳೆ ನಗರಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಭದ್ರತೆಯ ದೃಷ್ಠಿಯಿಂದ ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸಕ್ಕಾಗಿ ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಕೇಂಗೇರಿ ಮತ್ತು ಕೇಂಗೇರಿ ಉಪನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜ್‌ಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಜೂ.20ರಂದು ಬೆಳಗ್ಗೆ 11.45ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಇಂಡಿಯನ್ ಇನ್ಸ್​ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.
ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.
ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡುತ್ತಾರೆ.
ಸಂಜೆ 5ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್‌ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ.
ಸಂ5. 50ಕ್ಕೆ ಮೈಸೂರಿಗೆ ಆಗಮಿಸುತ್ತಾರೆ.
ಸಂಜೆ 6ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ಮಾಡುತ್ತಾರೆ.
ಸಂಜೆ 7.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಾರೆ. ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡುತ್ತಾರೆ.
ನಂತರ ರಾತ್ರಿ 8.15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸುತ್ತಾರೆ. ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂ.21ರ ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸುವ ಪ್ರಧಾನಿ, ಯೋಗ ಶಿಬಿರದಲ್ಲಿ ಪಾಲ್ಗೊಳುತ್ತಾರೆ.
ಅರಮನೆಯಲ್ಲಿ ರಾಜ ಮನೆತನದವರ ಜೊತೆ ಉಪಹಾರ ಸೇವಿಸುತ್ತಾರೆ. ಬಳಿಕ ಬೆಳಿಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸುತ್ತಾರೆ.

ಪ್ರಧಾನಿ ಜೂನ್ 20ರಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾಗವಹಿಸಲಿರುವ ಕಾರ್ಯಕ್ರಮಕ್ಕಾಗಿ ಸಿದ್ಧತಾ ಕಾರ್ಯ ಅಂತಿಮ ಹಂತದಲ್ಲಿದ್ದು, ಸುಮಾರು 33 ಎಕರೆ ವಿಸ್ತೀರ್ಣ ಹೊಂದಿರುವ ಕೊಮ್ಮಘಟ್ಟ ನೈಸ್ ಮೈದಾನದ 10 ಎಕರೆ ಪ್ರದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಮುಖ್ಯ ವೇದಿಕೆ 140/140 ವಿಸ್ತೀರ್ಣ ಒಳಗೊಂಡಿದ್ದರೆ, 700/400 ವಿಸ್ತೀರ್ಣದಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 40 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜ್‌ಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಜೂ.20ರಂದು ಬೆಳಗ್ಗೆ 11.45ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಇಂಡಿಯನ್ ಇನ್ಸ್​ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.
ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.
ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡುತ್ತಾರೆ.
ಸಂಜೆ 5ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್‌ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸುತ್ತಾರೆ.
ಸಂ5. 50ಕ್ಕೆ ಮೈಸೂರಿಗೆ ಆಗಮಿಸುತ್ತಾರೆ.
ಸಂಜೆ 6ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ಮಾಡುತ್ತಾರೆ.
ಸಂಜೆ 7.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಾರೆ. ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡುತ್ತಾರೆ.
ನಂತರ ರಾತ್ರಿ 8.15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸುತ್ತಾರೆ. ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂ.21ರ ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸುವ ಪ್ರಧಾನಿ, ಯೋಗ ಶಿಬಿರದಲ್ಲಿ ಪಾಲ್ಗೊಳುತ್ತಾರೆ.
ಅರಮನೆಯಲ್ಲಿ ರಾಜ ಮನೆತನದವರ ಜೊತೆ ಉಪಹಾರ ಸೇವಿಸುತ್ತಾರೆ. ಬಳಿಕ ಬೆಳಿಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸುತ್ತಾರೆ.

ಪ್ರಧಾನಿ ಜೂನ್ 20ರಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾಗವಹಿಸಲಿರುವ ಕಾರ್ಯಕ್ರಮಕ್ಕಾಗಿ ಸಿದ್ಧತಾ ಕಾರ್ಯ ಅಂತಿಮ ಹಂತದಲ್ಲಿದ್ದು, ಸುಮಾರು 33 ಎಕರೆ ವಿಸ್ತೀರ್ಣ ಹೊಂದಿರುವ ಕೊಮ್ಮಘಟ್ಟ ನೈಸ್ ಮೈದಾನದ 10 ಎಕರೆ ಪ್ರದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಮುಖ್ಯ ವೇದಿಕೆ 140/140 ವಿಸ್ತೀರ್ಣ ಒಳಗೊಂಡಿದ್ದರೆ, 700/400 ವಿಸ್ತೀರ್ಣದಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 40 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

RELATED TOPICS:
English summary :Modi to Bangalore on Monday

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...