Sun,May19,2024
ಕನ್ನಡ / English

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ | JANATA NEWS

22 Jun 2022
8105

ಹಾಸನ : ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಇಂದು ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ ಅವರು, ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದರು.

ಈ ಬಗ್ಗೆ ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಎಲ್ಲವೂ ಕೇಶವಕೃಪಾದಲ್ಲಿ ತೀರ್ಮಾನವಾಗುತ್ತದೆ. ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ, ಅವರನ್ನ ನೋಡಿದರೆ ನನಗೆ ಕನಿಕರ ಬರುತ್ತದೆ ಎಂದರು.

ಬೆಂಗಳೂರಿನ ಕೊಮ್ಮಘಟ್ಟ ಸಭೆಯಲ್ಲಿನ ಮಾತುಗಳನ್ನು ಪ್ರಸ್ತಾಪಿಸಿ, ಪ್ರಧಾನಿ ಸ್ಥಾನದಲ್ಲಿ ನಿಂತು ಮಾತನಾಡಬೇಕಾದರೆ ಯೋಚನೆ ಮಾಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಬೇರೆ ಸರಕಾರಗಳು ಈ ನಾಡಿಗೆ ಕೊಟ್ಟ ಕೊಡುಗೆಗಳನ್ನು ಸ್ಮರಿಸಿಕೊಳ್ಳವುದು ದೊಡ್ಡತನ ಎಂದು ಹೇಳಿದರು.

ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಅಭಿವೃದ್ಧಿ ಇರಲಿಲ್ಲ. ಬರಗಾಲವಿತ್ತು. ಅಂದಿನಿಂದ ದೇಶದ ಬೆಳವಣಿಗೆ ಹಲವಾರು ನಾಯಕರು ಕೊಡುಗೆ ಕೊಟ್ಟಿದ್ದಾರೆ. ಬೇರೆ ಸರಕಾರಗಳು ಏನೂ ಮಾಡೇ ಇಲ್ಲ. ಎಲ್ಲಾ ಕಾರ್ಯಕ್ರಮಗಳು ನನ್ನಿಂದ ಆಗಿವೆ ಎನ್ನುವ ಭಾವನೆ ಪ್ರಧಾನಿಗೆ ಇದೆ. ನೆಹರು ಅವರು ಪ್ರಧಾನಿಯಾಗಿದ್ದಾಗ ಕೈಗಾರಿಕೆ, ನೀರಾವರಿಗೆ ಇಟ್ಟಿದ್ದ ಬಜೆಟ್‌, ಈ ದೇಶಕ್ಕೆ ಕೊಟ್ಟ ಕೊಡುಗೆಗಳನ್ನು ನೆನಪಿಸಿಕೊಳ್ಳಬೇಕು ಎಂದರು.

ಬೆಂಗಳೂರು ಅಭಿವೃದ್ಧಿಗೆ 33 ಸಾವಿರ ಕೋಟಿ ರೂ. ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಇದರಲ್ಲಿ ಒಬ್ಬರ ಕೊಡುಗೆ ಮಾತ್ರ ಇದೆಯೆ..? ಹಿಂದಿನ ಸರಕಾರಗಳು ಬೆಂಗಳೂರು ಅಭಿವೃದ್ಧಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿದ್ದವು. 15 ಸಾವಿರ ಕೋಟಿಯ ಸಬರ್‌ಬನ್‌ ರೈಲ್ವೆ ಯೋಜನೆಗೆ ಚಾಲನೆ ನೀಡಿದ್ದಾರೆ. 40 ವರ್ಷದಲ್ಲಿ ಆಗಿರಲಿಲ್ಲ, 40 ತಿಂಗಳಿನಲ್ಲಿ ಮಾಡುತ್ತೇನೆ ಎಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ಸರ್ಕಾರದಲ್ಲಿ ಮತ್ತು ದೇವೇಗೌಡರು ಪ್ರಧಾನಿಯಾಗಿದ್ದ ಮಾಡಿದ್ದ ಶಂಕುಸ್ಥಾಪನೆ, ಕಾಮಗಾರಿಯ ಕ್ರೆಡಿಟ್ ನ್ನು ಮೋದಿಯವರು ಈಗ ತೆಗೆದುಕೊಳ್ಳುತ್ತಿದ್ದಾರೆ ಎಂದರು. ವಿರೋಧ ಪಕ್ಷದವರನ್ನು ತೆಗಳುವುದು, ಟೀಕೆ ಮಾಡುವುದು ಬಿಜೆಪಿಯ ಜಾಯಮಾನ, ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ವಿರೋಧ ಪಕ್ಷಗಳು ಮಾಡಿರುವ ಉತ್ತಮ ಕೆಲಸಗಳನ್ನು ಸ್ಮರಿಸುವ ಒಳ್ಳೆಯ ಗುಣವೇ ಅವರಿಗಿಲ್ಲ.

ಆಧಾರ್ ಕಾರ್ಡು, ಜಿಎಸ್ ಟಿ, ನರಗಾ ಯೋಜನೆ ತಂದವರ್ಯಾರು ಮನಮೋಹನ್ ಸಿಂಗ್ ಸರ್ಕಾರ ಕೇಂದ್ರದಲ್ಲಿದ್ದಾಗ ಬಂದವು. ಹಲವಾರು ಸರ್ಕಾರಗಳು ಈ ದೇಶದಲ್ಲಿ ಆಡಳಿತ ನಡೆಸಿದ್ದಾಗ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವೆಲ್ಲವನ್ನೂ ಮರೆಮಾಚಿ ಕಳೆದ 8 ವರ್ಷಗಳಲ್ಲಿ ಮೋದಿ ಸರ್ಕಾರ ಬಂದ ಮೇಲೆಯೇ ಎಲ್ಲವೂ ಆಯಿತು ಎಂದು ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು

RELATED TOPICS:
English summary :Bommai Remote Control CM

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...