ವಿದ್ಯುತ್ ದರ ಹೆಚ್ಚಳ: ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ: ಸುನಿಲ್ ಕುಮಾರ್ | JANATA NEWS
ಬೆಂಗಳೂರು : ವಿದ್ಯುತ್ ದರ ಹೆಚ್ಚಳ ಮಾಡುವುದು ಸರ್ಕಾರವಲ್ಲ. ಕೆಇಆರ್ಸಿ ಈ ನಿರ್ಧಾರ ಮಾಡಲಿದೆ ಎಂದು ವಿದ್ಯುತ್ ದರ ಏರಿಕೆ ಕುರಿತು ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಸಂಬಂಧ ಎಲ್ಲಾ ಎಸ್ಕಾಂಗಳು ಕೆಇಆರ್ಸಿ ಮುಂದೆ ಹೋಗೋದು ಸಹಜ. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲಿ ನಿರ್ಧಾರ ತೆಗೆದುಕೊಂಡಿದ್ದರು. ಕಲ್ಲಿದ್ದಲು, ಆಯಿಲ್ ದರ ಹೆಚ್ಚಾದಾಗ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದ ಬಗ್ಗೆ ನಿರ್ಧಾರ ಮಾಡಿದ್ದರು.
ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೂ ದರ ಪರಿಷ್ಕರಣೆ ಮಾಡಲಾಗುತ್ತಿದೆ. 3 ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡುತ್ತಾ ಬರಲಾಗುತ್ತಿದೆ. ಇಲ್ಲಿ ಸರ್ಕಾರದಿಂದ ಯಾವುದೇ ದರ ಹೆಚ್ಚಳ ಮಾಡಿಲ್ಲ. ಇಂಧನ ದರ ಪರಿಷ್ಕರಣೆಯನ್ನ ಕೆಇಆರ್ಸಿಯೇ ಮಾಡಿದೆ ಎಂದು ಹೇಳಿದರು.
ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣ ಸಂಬಂಧ ಮಾತನಾಡಿ, ಇಸ್ಲಾಮಿಕ್ ಭಯೋತ್ಪಾದನೆಯ ಮುಂದುವರಿದ ಭಾಗವಿದು. ಇಲ್ಲಿಯವರೆಗೆ ಕಾಶ್ಮೀರ, ಕೇರಳದಲ್ಲಿ, ಕರ್ನಾಟಕದಲ್ಲಾಗಿತ್ತು. ಆದರೆ ಇಂದು ರಾಜಸ್ಥಾನದಲ್ಲೂ ಆಗಿದೆ. ಹೀಗೆ ಮುಂದುವರಿದರೆ ಬದುಕುವುದು ಬಹಳ ಕಷ್ಟವಾಗುತ್ತದೆ ಎಂದರು.