ಕನ್ಹಯ್ಯಾ ಲಾಲ್ ಬರ್ಬರ ಹತ್ಯೆ : ತನಿಖೆಯನ್ನು ಎನ್ಐಎ ವಹಿಸಿಕೊಳ್ಳುವಂತೆ ಅಮಿತ್ ಶಾ ಸೂಚನೆ | JANATA NEWS
ಉದಯಪುರ : ನಿನ್ನೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ತೇಲಿಯ ಕ್ರೂರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಹಿಸಿಕೊಳ್ಳುವಂತೆ ಗೃಹ ಸಚಿವರು ಸೂಚಿಸಿದ್ದಾರೆ. ಯಾವುದೇ ಸಂಸ್ಥೆಯ ಒಳಗೊಳ್ಳುವಿಕೆ ಮತ್ತು ಅಂತರಾಷ್ಟ್ರೀಯ ಲಿಂಕ್ಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು, ಎಂದು ಭಾರತೀಯ ಗೃಹ ವ್ಯವಹಾರಗಳ ಸಚಿವಾಲಯ(ಎಂಎಚ್ಎ) ಹೇಳಿಕೆಯಲ್ಲಿ ತಿಳಿಸಿದೆ.
"ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ಭಯೋತ್ಪಾದಕ ದಾಳಿ", ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಕ್ರೂರ ಕೃತ್ಯವನ್ನು ಖಂಡಿಸಿದೆ, "ಹಂತಕರು ಅದನ್ನು ಚಿತ್ರೀಕರಿಸಿದ್ದಾರೆ ಮತ್ತು ಸಮಾಜವನ್ನು ಭಯಭೀತಗೊಳಿಸುವ ಪ್ರಯತ್ನದಲ್ಲಿ ವೀಡಿಯೊವನ್ನು ವೈರಲ್ ಮಾಡಿದ್ದಾರೆ".
ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವಹಿಸಿಕೊಳ್ಳುವಂತೆ ಗೃಹ ಸಚಿವಾಲಯ(ಎಂಎಚ್ಎ) ನಿರ್ದೇಶನ ನೀಡಿದೆ. ಮಂಗಳವಾರ ಹಗಲು ಹೊತ್ತಿನಲ್ಲಿ ಇಬ್ಬರು ವ್ಯಕ್ತಿಗಳಿಂದ ಕನ್ಹಯ್ಯಾ ಲಾಲ್ ತೇಲಿಯ ಶಿರಚ್ಛೇದ ಮಾಡಲಾಗಿದೆ.
ಎಂಎಚ್ಎ ಅಧಿಕೃತ ಟ್ವಿಟ್ಟರ್ನ ಖಾತೆಯಲ್ಲಿ ಹೇಳಿಕೆಯನ್ನು ಪೋಸ್ಟ್ ಮಾಡಿದೆ, “ರಾಜಸ್ಥಾನದ ಉದಯಪುರದಲ್ಲಿ ನಿನ್ನೆ ನಡೆದ ಶ್ರೀ ಕನ್ಹಯ್ಯಾ ಲಾಲ್ ತೇಲಿಯ ಕ್ರೂರ ಹತ್ಯೆಯ ತನಿಖೆಯನ್ನು ವಹಿಸಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ಎಂಎಚ್ಎ ನಿರ್ದೇಶಿಸಿದೆ. ಯಾವುದೇ ಸಂಸ್ಥೆಯ ಒಳಗೊಳ್ಳುವಿಕೆ ಮತ್ತು ಅಂತರಾಷ್ಟ್ರೀಯ ಲಿಂಕ್ಗಳನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತದೆ, ಎಂದು ಹೇಳಿಕೆ ಹೇಳುತ್ತದೆ.