Sun,May19,2024
ಕನ್ನಡ / English

ವೈದ್ಯನ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ 1.16 ಕೋಟಿ ರೂ. ವಂಚನೆ | JANATA NEWS

01 Jul 2022
2542

ಬೆಂಗಳೂರು : ಖಾಸಗಿ ಕಾಲೇಜಿನಲ್ಲಿ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ವೈದ್ಯನನ್ನು ನಂಬಿಸಿ 1.16 ಕೋಟಿ ರೂ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ಅಳಂದದಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ ಶಂಕರ್ ಬಾಬುರಾವ್ ತಮ್ಮ ಮಗನಿಗೆ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವ ಆಸೆ ಹೊಂದಿದ್ದರು. ಹಲವು ಸಲ ಬೆಂಗಳೂರಿಗೆ ತಿರುಗಾಡಿದರೂ ಸೀಟು ಸಿಕ್ಕಿರಲಿಲ್ಲ. ಈ ಸಂದರ್ಭದಲ್ಲಿ ಎಂಟು ವರ್ಷಗಳಿಂದ‌ ಪರಿಚಿತನಾಗಿದ್ದ ನಾಗರಾಜ್‌ ತನಗೆ ಮೆಡಿಕಲ್​ ಕಾಲೇಜೊಂದರಲ್ಲಿ ಪರಿಚಯಸ್ಥರಿದ್ದಾರೆ, ಅಲ್ಲಿ ಮಗನಿಗೆ ಸೀಟು ಕೊಡಿಸುತ್ತೇನೆ‌‌ ಎಂದು ಭರವಸೆ ಕೊಟ್ಟಿದ್ದಾನೆ.

ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಮಗನಿಗೆ ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ 66 ಲಕ್ಷ ರೂ. ಹಣವನ್ನು ನಾಗರಾಜ್ ಪಡೆದಿದ್ದ. ಹಂತ ಹಂತವಾಗಿ 1.16 ಕೋಟಿ ರೂ. ಹಣ ಪಡೆದಿದ್ದ.

ಒಂದು ವರ್ಷವಾದರೂ ಶಂಕರ್ ಬಾಬುರಾವ್ ಅವರ ಪುತ್ರನಿಗೆ ಮೆಡಿಕಲ್ ಸೀಟು ಕೊಡಿಸಲಾಗಲಿಲ್ಲ. ತನ್ನ ಹಣ ವಾಪಸು ನೀಡುವಂತೆ ಶಂಕರ್ ಸ್ನೇಹಿತ ನಾಗರಾಜ್‌ಗೆ ಬೇಡಿಕೆ ಇಟ್ಟಿದ್ದ. ಕೆಲ ದಿನಗಳ ಹಿಂದೆ ಹಣ ವಾಪಸು ಕೊಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡಿದ್ದ.

ಗಾಂಧಿನಗರದ ಲಾಡ್ಜ್​ನಲ್ಲಿ‌ ಶಂಕರ್ ರೂಮ್ ಬುಕ್‌ ಮಾಡಿ, ನಂತರ ಮಹಾರಾಷ್ಟ್ರ ಮೂಲದ‌ ಲೈಂಗಿಕ ಕಾರ್ಯಕರ್ತೆಯರನ್ನು ರೂಮ್​ಗೆ ಕಳುಹಿಸಿ, ಅವರು ಫೋಟೊ ಕ್ಲಿಕ್ಕಿಸಿಕೊಳ್ಳುವಂತೆ ಮಾಡಿ ಹನಿಟ್ರ್ಯಾಪ್​ ಯತ್ನ ಮಾಡಿದ್ದಾನೆ.

ಅಷ್ಟೇ ಅಲ್ಲ, ಮಧ್ಯರಾತ್ರಿ ಪೊಲೀಸರ ವೇಷದಲ್ಲಿ ಕೆಲವರು ಎಂಟ್ರಿ ಕೊಟ್ಟಿದ್ದಾರೆ. ವೇಶ್ಯಾವಾಟಿಕೆ ಜಾಲ ನಡೆಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ ಎಂದು ಶಂಕರ್‌ಗೆ ಬೆದರಿಸಿದ್ದಾರೆ. ಬಳಿಕ ಶಂಕರ್ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಈ ಸಂಬಂಧ ಪೊಲೀಸ್​ ಪ್ರಕರಣ ದಾಖಲಾಗದಿರಲು 50 ಲಕ್ಷ ರೂ. ನೀಡುವಂತೆ ಆರೋಪಿಗಳು ಶಂಕರ್​ ಅವರಿಗೆ ಬೇಡಿಕೆ ಇಟ್ಟಿದ್ದಾರೆ.

ಹಣ ನೀಡದೆ ಹೋದರೆ ನಿನ್ನನ್ನು ಬಂಧಿಸುತ್ತಾರೆ, ಆಗ ನಿನ್ನ ಮಾನ-ಮರ್ಯಾದೆ ಹೋಗಲಿದೆ ಎಂದು ನಾಗರಾಜ್​ ಬೆದರಿಸಿದ್ದಾನೆ. ಇದಕ್ಕೆ ಅಂಜಿದ‌ ಶಂಕರ್ ಊರಿಗೆ ಹೋಗಿ ಹಣ ನೀಡುವುದಾಗಿ ಒಪ್ಪಿಕೊಂಡು, ಕಲಬುರಗಿಗೆ ಬಂದು ಖಾಸಗಿ ಬ್ಯಾಂಕ್​ನಲ್ಲಿ 50 ಲಕ್ಷ ರೂ. ಸಾಲ ಪಡೆದು ಆರೋಪಿಗಳ ಕೈಗೆ ತಂದಿಟ್ಟಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇಷ್ಟಕ್ಕೆ ಸುಮ್ಮನಾಗದ ವಂಚಕ ನಾಗರಾಜ್ ಮತ್ತು ಟೀಂ, ನಿಮ್ಮ ಕೇಸಿನಲ್ಲಿ ಜೈಲಿಗೆ ಹೋಗಿರುವ ಇಬ್ಬರು ಹುಡುಗಿಯರಿಗೆ ಜಾಮೀನು ಕೊಡಿಸಲು 20 ಲಕ್ಷ ರೂ. ಬೇಕಾಗಿದೆ. ಈ ಕೂಡಲೆ ನೀವು ಕೊಡದಿದ್ದರೆ, ಅವರು ನೀವು ಸಿಕ್ಕಿಬಿದ್ದಿರುವ ವಿಚಾರವನ್ನು ಬಹಿರಂಗ ಮಾಡಲಿದ್ದಾರೆ ಎಂದು ನಾಗರಾಜ್ ಪುನಃ ಹೆದರಿಸಿದ್ದಾನೆ. ತಾನು ಮೋಸ ಹೋಗಿರುವ ವಿಚಾರ ತಿಳಿದ ವೈದ್ಯ ಶಂಕರ್ ಆ ಬಳಿಕ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕಲಬುರಗಿಯ ಆಳಂದ ಮೂಲದ ವೈದ್ಯ ಶಂಕರ್ ಬಾಬುರಾವ್ ನೀಡಿದ ದೂರಿನ ಮೇರೆಗೆ ವಂಚಕರಾದ ನಾಗರಾಜ್, ಮಲ್ಲಿಕಾರ್ಜುನ್, ಮಧು, ಬಸವರಾಜ್ ಹಾಗೂ ಹಮೀದ್​ ಎಂಬುವವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

RELATED TOPICS:
English summary :1.16 crores for the doctors son, believing that he would get an MBBS seat. Fraud

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...