ಎಸಿಬಿಯಿಂದ ಬೆಂಗಳೂರು ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಬಂಧನ | JANATA NEWS
ಬೆಂಗಳೂರು : ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು ಎಸಿಬಿ ಸೋಮವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಲಂಚ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಇಂದು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಮಂಜುನಾಥ್ ಅವರ ವಿರುದ್ಧ ಭೂ ವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಡಿಸಿ ಕಚೇರಿಯಲ್ಲಿಯೇ ತಮ್ಮ ಕೆಳ ಹಂತದ ಆಪ್ತ ಅಧಿಕಾರಿಗಳ ಮೂಲಕ ಪಂಚ ಪಡೆದಿರುವ ಆರೋಪ ಮಾಡಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಜೆ. ಮಂಜುನಾಥ್ ಅವರು, ಆರೋಪ ಕೇಳಿ ಬಂದಾಗ ಜಿಲ್ಲಾಧಿಕಾರಿಯಾಗಿದ್ದರು.