ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ ಎಸಿಬಿ : ನಿವಾಸ ಸೇರಿದಂತೆ 5 ಸ್ಥಳಗಳಲ್ಲಿ ದಾಳಿ | JANATA NEWS
ಬೆಂಗಳೂರು : ಇಡಿ ವರದಿಯ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಬಿಝಡ್ ಜಮೀರ್ ಅಹಮದ್ ಖಾನ್ ವಿರುದ್ಧ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಇಂದು ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡಿದ್ದು, ಸದಾಶಿವ ನಗರ, ಬನಶಂಕರಿ, ಕಲಾಸಿಪಾಳ್ಯ ಹಾಗೂ ಬೆಂಗಳೂರು ಕಂಟೋನ್ಮೆಂಟ್ನಲ್ಲಿರುವ ಅವರ ನಿವಾಸ ಸೇರಿದಂತೆ 5 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತರು ಎಂದು ಪ್ರಸಿದ್ಧರಾಗಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದಿಂದ(ಎಸಿಬಿ) ಸದ್ಯ ಕಾಂಗ್ರೆಸ್ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರ 2 ಕಚೇರಿಗಳು ಮತ್ತು 3 ನಿವಾಸಗಳ ಮೇಲೆ ದಾಳಿ ನಡೆಯುತ್ತಿದೆ.
ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರ ನಿವಾಸ ಸೇರಿದಂತೆ ಐದು ವಿವಿಧ ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.