ಜ್ಯೋತಿಷಿ ಮನೆಗೆ ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಹಾಡಹಗಲೇ ದರೋಡೆ | JANATA NEWS
ಬೆಂಗಳೂರು : ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪ ಬಾಡಿಗೆ ಮನೆ ಮಾಡಿಕೊಂಡು ಭವಿಷ್ಯ ಹೇಳ್ತಿದ್ದ ಜ್ಯೋತಿಷಿ ಪ್ರಮೋದ್ ಅವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಪ್ರಮೋದ್ ಜ್ಯೋತಿಷಿಗೆ ಮದುವೆಯಾಗಿರಲಿಲ್ಲ. ಮನೆಯಲ್ಲಿ ಒಬ್ಬರೇ ಇರುತಿದ್ದರು.
ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದಿದ್ದ ಮೂವರು ದರೋಡೆಕೋರರು ಮನೆಯಲ್ಲಿ ಒಬ್ಬರೇ ಇರುವ ವಿಷಯ ತಿಳಿದು ಅವರ ಕೈ ಕಾಲು ಕಟ್ಟಿ ಹಲ್ಲೆ ನಡೆಸಿ, ಮನೆಯಲ್ಲಿದ್ದ 400 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಪೊಲೀಸರು ಅಕ್ಕಪಕ್ಕದ ಸಿಸಿಟಿವಿಗಳ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.