ಕಳ್ಳನೆಂದು ಭಾವಿಸಿ ಬ್ಯಾಂಕ್ ಉದ್ಯೋಗಿಯ ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್! | JANATA NEWS
ಬೆಂಗಳೂರು : ಅಪಾರ್ಟ್ಮೆಂಟ್ ಒಳಗೆ ಅನುಮಾನಾಸ್ಪದವಾಗಿ ಹೋಗುತ್ತಿದ್ದ ವ್ಯಕ್ತಿ ಕಳ್ಳನೆಂದು ಭಾವಿಸಿ ಸೆಕ್ಯುರಿಟಿ ಗಾರ್ಡ್ ತಲೆಗೆ ಬಲವಾಗಿ ಹೊಡೆದ ಕಾರಣಕ್ಕೆ ಬ್ಯಾಂಕ್ ಉದ್ಯೋಗಿಯೊಬ್ಬ ಕೊಲೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇದೇ ತಿಂಗಳು 5 ರಂದು ಮಾರತಳ್ಳಿ ಸಮೀಪದ ವನ್ಶಿ ಸಿಟಾಡೆಲ್ ಅಪಾರ್ಟ್ಮೆಂಟ್ ಅಪರಿಚಿತ ವ್ಯಕ್ತಿ ಬಂದಿದ್ದ. ಮಧ್ಯರಾತ್ರಿ ಸುಮಾರು ಎರಡು ಗಂಟೆ ವೇಳೆ ಬ್ಯಾಂಕ್ ಉದ್ಯೋಗಿ ಅಭಿಷೇಕ್, ಪಾರ್ಟಿ ಮಾಡಿ ಬಂದು ಕಾಂಪೌಂಡ್ ಹಾರಿ ಬಂದಿದ್ದರು.. ಈ ವೇಳೆ ಅಪಾರ್ಟ್ಮೆಂಟ್ ಒಳಗೆ ಬರುತ್ತಿರುವುದನ್ನ ಗಮನಿಸಿದ ಸೆಕ್ಯುರಿಟಿ ಗಾರ್ಡ್, ಆತನ್ನನ್ನ ಪ್ರಶ್ನೆ ಕೇಳಿದ್ದಾನೆ. ಸೆಕ್ಯುರಿಟಿ ಗಾರ್ಡ್ ಎಷ್ಟೇ ಕೇಳಿದರು ಬಾಯಿಬಿಡದ ಅಪರಿಚಿತ ವ್ಯಕ್ತಿ ಮನೆಗೆ ನುಗ್ಗಲು ಯತ್ನಿಸಿದ್ದ.
ಇದನ್ನು ಗಮನಿಸಿದ ಸೆಕ್ಯುರಿಟಿ ಆತ ಕಳ್ಳನೆಂದು ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಅಲ್ಲಿಯೇ ಜಿಮ್ನಲ್ಲಿದ್ದ ರಾಡ್ನಿಂದ ಅಭಿಷೇಕ್ ತಲೆಗೆ ಹೊಡೆದುಬಿಟ್ಟಿದ್ದಾರೆ. ಅಭಿಷೇಕ್ ತಲೆಗೆ ಗಂಭೀರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ.
ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಹಾಗೂ ಸ್ನೇಹಿತ ಅಜೀತ್ ಮುರಾ ಎಂಬುವವರು ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆದರೆ ಆಮೇಲೆ ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿದೆ. ಛತ್ತೀಸ್ಗಢ ಮೂಲದ ಬ್ಯಾಂಕ್ ಉದ್ಯೋಗಿ ಅಭಿಷೇಕ್ ತರಬೇತಿ ಸಲುವಾಗಿ ಬೆಂಗಳೂರಿಗೆ ಬಂದಿದ್ದು, ಮಧ್ಯರಾತ್ರಿ ಪಾರ್ಟಿ ಮುಗಿಸಿ ಅಪಾರ್ಟ್ಮೆಂಟ್ ಒಳಗೆ ಬರುತ್ತಿರುವ ವಿಷಯ ತಿಳಿದು ಬಂದಿದೆ.