ಶಾಲೆಗೆ ಹೋಗಲು ಇಷ್ಟವಿಲ್ಲದ ಬಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ | JANATA NEWS
ರಾಯಚೂರು : ಶಾಲೆಗೆ ಹೋಗಲು ಇಷ್ಟವಿಲ್ಲ ವಿದ್ಯಾರ್ಥಿಯೋರ್ವ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯ ತಾಲೂಕಿನ ಡೋಣಮರಡಿ ಶಾಲಾ ಆವರಣದಲ್ಲಿ ನಡೆದಿದೆ.
ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಈತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಬಾಲಕನಿಗೆ ಶಾಲೆಗೆ ಹೋಗಲು ಇಷ್ಟ ಇರಲಿಲ್ಲವಂತೆ. ಇಂದು ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಡೋಣಮರಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :A boy who did not want to go to school committed suicide by hanging himself from a tree