ನಡುರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ | JANATA NEWS
ಶಿವಮೊಗ್ಗ : ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಐದಾರು ಮಂದಿ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬವಾಗಿ ಹತ್ಯೆ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಮಧ್ಯೆ ರಸ್ತೆಯಲ್ಲಿ ಹರಿದ ನೆತ್ತರ ಕೋಡಿ ಕಂಡು ಜನತೆ ಬೆಚ್ಚಿ ಬಿದ್ದಿದ್ದಾರೆ.
ವಿನೋಬನಗರದ ಪೊಲೀಸ್ ಚೌಕಿಯ ಬಾರ್ ಆಯಂಡ್ ರೆಸ್ಟೋರೆಂಟ್ ಮುಂಭಾಗ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಹಂದಿ ಅಣ್ಣಿಯನ್ನು 6 ಜನರ ತಂಡ ಅಟ್ಟಾಡಿಸಿಕೊಂಡು ಲಾಂಗು-ಮಚ್ಚುಗಳಿಂದ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
ದುಷ್ಕರ್ಮಿಗಳು ಹಂದಿ ಅಣ್ಣಿ ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸಾಗರ ರಸ್ತೆಯಲ್ಲಿ 2017ರಲ್ಲಿ ಹಾಡಹಗಲೇ ಗ್ಯಾರೇಜ್ ವೊಂದರಲ್ಲಿ ಲವ-ಕುಶರನ್ನು ಹಾಡ ಹಗಲೇ ಕೊಚ್ಚಿ ಹಾಕಿದ್ದನು. ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಹಂದಿ ಅಣ್ಣಿ. ಕೆಲ ವರ್ಷ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಈತನ ಮೇಲೆ 8 ಕೊಲೆ ಪ್ರಕರಣಗಳಿದೆ. ಹಳೇ ವೈಷ್ಯಮದ ಹಿನ್ನೆಲೆ ಹಂದಿ ಅಣ್ಣಿಯನ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.