ಚಾಕು ಇರಿತಕ್ಕೊಳಗಾಗಿದ್ದ BBMP ಮಾಜಿ ಕಾರ್ಪೋರೇಟರ್ ಸಾವು | JANATA NEWS
ಬೆಂಗಳೂರು : ಚಾಕು ಇರಿತಕ್ಕೊಳಗಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಸ್ಕೆಆರ್ ಮಾರ್ಕೆಟ್ ವಾರ್ಡ್ನ ಮಾಜಿ ಸದಸ್ಯ ಅಯೂಬ್ ಖಾನ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಘಟನೆಗೆ ಮಸೀದಿ ಅಧ್ಯಕ್ಷ ಪಟ್ಟವೇ ಕಾರಣ ಎಂದು ಆಯುಬ್ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಟಿಪ್ಪುನಗರದ ಖುದಾಯತ್ ಮಸೀದಿಗೆ ಆಯುಬ್ ಅಧ್ಯಕ್ಷರಾಗಿದ್ದರು. ಈ ಸ್ಥಾನ ಬಿಟ್ಟುಕೊಡುವಂತೆ ಆಯುಬ್ ಅಣ್ಣನ ಮಗ ಮತೀನ್ ಆಗಾಗ ಗಲಾಟೆ ಮಾಡುತ್ತಿದ್ದ. ಇದೇ ವಿಚಾರವಾಗಿ ಈ ಹಿಂದೆ ಕೊಲೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಹೇಳಿದ್ದಾರೆ.
ಬುಧವಾರ ರಾತ್ರಿ ಕೂಡ ಚಾಮರಾಜಪೇಟೆಯ ವಿನಾಯಕ ಚಿತ್ರಮಂದಿರ ಸಮೀಪ ಅಯೂಬ್ ಖಾನ್ ಮನೆ ಬಳಿ ಮತ್ತಿನ್ ಗಲಾಟೆ ಮಾಡಿದ್ದ. ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮತ್ತಿನ್, ಚಾಕುವಿನಿಂದ ಅಯೂಬ್ ಖಾನ್ ಹೊಟ್ಟೆಗೆ ಇರಿದಿದ್ದ.
ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದಿದ್ದ ಅಯೂಬ್ ಖಾನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಯೂಬ್ ಮೃತಪಟ್ಟಿದ್ದಾರೆ. ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.