ನಾನು ಸನ್ಯಾಸಿ ಅಲ, ಖಾವಿ ತೊಟ್ಟಿಲ್ಲ ನಾನು ಖಾದಿ ತೊಟ್ಟಿದ್ದೇನೆ | JANATA NEWS
ಬೆಂಗಳೂರು : ನಾನೇನು ಸನ್ಯಾಸೀನಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ತಾನೇ ಪ್ರಮುಖ ಸ್ಪರ್ಧಾಳು ಎಂಬ ಸಂದೇಶ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಸನ್ಯಾಸಿಯಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಅಂತೇನಿಲ್ಲ. ನಮ್ಮದು ಕಾಂಗ್ರೆಸ್ ಬಣ ಮಾತ್ರ, ಮತ್ಯಾವುದೇ ಬಣವಿಲ್ಲ. ಎಸ್ಎಂ ಕೃಷ್ಣರ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹಾಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಇದೇ ವೇಳೆ ಹೇಳಿದ ಅವರು, ಒಬ್ಬ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇರಿಸಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಗಾಗಿ ಸರ್ವೇ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ನ ಕೆಲ ನಾಯಕರು ಕಾಂಗ್ರೆಸ್ ಸೇರುವ ಸುಳಿವು ನೀಡಿದ ಡಿಕೆಶಿ, ಕೆಲವರು ಸೇರುತ್ತಾರೆ. ಆದರೆ ಇದರ ಗುಟ್ಟನ್ನು ಬಿಟ್ಟುಕೊಡುವುದಿಲ್ಲ. ಅದನ್ನು ರಹಸ್ಯವಾಗಿ ಇಡುತ್ತೇನೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು.