ರಸ್ತೆ ಅಪಘಾತದಲ್ಲಿ ಕರ್ನಾಟಕದ ಯೋಧ ಸಾವು | JANATA NEWS
ಬೆಂಗಳೂರು : ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೂರಜ್ ಸುತಾರ್(32) ಅಪಘಾತದಲ್ಲಿ ಮೃತಪಟ್ಟ ಯೋಧರಗಿದ್ದಾರೆ. ಇವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ. ಸೂರಜ್ ಅವರು ಕಳೆದ 10 ವರ್ಷದಿಂದ ಬಿಎಸ್ಎಫ್ ನಲ್ಲಿ ಸೇವೆ ಮಾಡುತ್ತಿದ್ದರು.
ಬಿಹಾರದ ಕಿಶನ್ಗಂಜ್ ಸರ್ದಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ದುರ್ಘಟನೆ ನಡೆದಿದೆ. ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆಯಷ್ಟೆ ಸೂರಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸೂರಜ್ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಳೆ ಪಶ್ಚಿಮ ಬಂಗಾಳದಿಂದ ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದೆ. ನಾಳೆಯೇ ಸ್ವಗ್ರಾಮದಲ್ಲಿ ಸೂರಜ್ ಅಂತ್ಯಸಂಸ್ಕಾರ ನೆರವೇರಲಿದೆ.