ಉತ್ತರಕನ್ನಡ : ಮಳೆ ಹಾನಿಗೆ ಹೆಚ್ಚಿನ ಪರಿಹಾರ ಬಿಡುಗಡೆಗೆ ದೇಶಪಾಂಡೆ ಒತ್ತಾಯ | JANATA NEWS
ಕಾರವಾರ : ಇತ್ತೀಚೆಗೆ ಸುರಿದ ಭಾರಿ ಮಳೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾರ್ವಜನಿಕ ಮತ್ತು ಸರಕಾರಿ ಆಸ್ತಿ-ಪಾಸ್ತಿಗೆ ಸಾಕಷ್ಟು ಹಾನಿಯಾಗಿದ್ದು, ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಶಾಸಕ ಆರ್.ವಿ.ದೇಶಪಾಂಡೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಮಳೆ ಮತ್ತು ನೆರೆಗೆ ವಿವಿಧ ಕಡೆಗಳಲ್ಲಿ ಗುಡ್ಡಗಳು ಕುಸಿತವಾಗಿ, ಅಲ್ಲಲ್ಲಿ ಜನಸಂಪರ್ಕವು ಕೂಡ ಕಡಿತಗೊಂಡಿದೆ. ಸಾಕಷ್ಟು ಪ್ರಮಾಣದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳು ಭಾಗಶಃ ಹಾಳಾಗಿದ್ದು, ಅವರ ಪುನರ್ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ನದಿ ತಟಗಳ ಪ್ರದೇಶದಲ್ಲಿ ವಾಸಿಸುವ ಮನೆಗಳಿಗೆ ನೀರು ನುಗ್ಗಿದ್ದು, ಹಲವಾರು ಮನೆಗಳು ಜಲಾವೃತವಾಗಿದ್ದವು. ಕೆಲವೆಡೆ ಮನೆಗಳು ಕುಸಿದಿದ್ದು, ಜೀವನಾವಶ್ಯಕ ಸಾಮಗ್ರಿಗಳು ನೀರು ಪಾಲಾಗಿರುತ್ತವೆ.
ಅಲ್ಲದೇ, ನದಿಗಳ ಅಕ್ಕ-ಪಕ್ಕದಲ್ಲಿರುವ ಜಮೀನುಗಳಿಗೆ ನೀರು ಹರಿದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ರೈತರ ಕೃಷಿ ಉಪಕರಣಗಳು, ಪಂಪಸೆಟ್ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುತ್ತವೆ.
ರೈತರಿಗೆ ಹಾಗೂ ನಿರಾಶ್ರಿತರಿಗೆ ಹೆಚ್ಚಿನ ಪರಿಹಾರ ನೀಡಿ, ರೈತರ ನೆರವಿಗೆ ಸರ್ಕಾರ ಧಾವಿಸಬೇಕಾಗಿದೆ. ಮೂಲಸೌಕರ್ಯಗಳ ದುರಸ್ತಿ ಮತ್ತು ಮರುಸ್ಥಾಪನೆಗಾಗಿ ಮುಖ್ಯಮಂತ್ರಿಗಳು ೫೦೦ ಕೋಟಿಗಳನ್ನು ಮಂಜೂರು ಮಾಡಿದ್ದಾರೆ. ಆದರೆ ಈಗ ಮಂಜೂರು ಮಾಡಿರುವ ೫೦೦ ಕೋಟಿ ಮೊತ್ತ ಸಾಕಾಗುವುದಿಲ್ಲ. ಕಾರಣ, ಹೆಚ್ಚಿನ ಅನುದಾನ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ, ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ಸಹ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ.
ಭಾರಿ ಮಳೆ ಹಾಗೂ ನೆರೆಗೆ ಜಿಲ್ಲೆಯಲ್ಲಿ ೫೬.೫೭ ಹೆಕ್ಟೆರ್ ಪ್ರದೇಶದ ಕೃಷಿ ಬೆಳೆ ಹಾನಿ ಹಾಗೂ ೧೪.೭೮ ಹೆಕ್ಟೆರ್ ತೋಟಗಾರಿಕಾ ಬೆಳೆ ಹಾನಿಯಾಗಿದೆ. ೨೪ ಮನೆಗಳಿಗೆ ಸಂಪೂರ್ಣ ಹಾನಿ, ೯೪ ಮನೆಗಳು ತೀವ್ರ ಹಾಗೂ ೫೦೨ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಳಿಯಾಳದಲ್ಲಿ ಮೂರು, ಹೊನ್ನಾವರ ಹಾಗೂ ಸಿದ್ದಾಪುರದಲ್ಲಿ ತಲಾ ಒಂದು ಸೇರಿದಂತೆ ಒಟ್ಟು ೫ ಜೀವ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.
ಉತ್ತರಕನ್ನಡದಲ್ಲಿ ತಗ್ಗಿದ ಮಳೆ
ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ಸಹ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ.
ಭಾರಿ ಮಳೆ ಹಾಗೂ ನೆರೆಗೆ ಜಿಲ್ಲೆಯಲ್ಲಿ ೫೬.೫೭ ಹೆಕ್ಟೆರ್ ಪ್ರದೇಶದ ಕೃಷಿ ಬೆಳೆ ಹಾನಿ ಹಾಗೂ ೧೪.೭೮ ಹೆಕ್ಟೆರ್ ತೋಟಗಾರಿಕಾ ಬೆಳೆ ಹಾನಿಯಾಗಿದೆ. ೨೪ ಮನೆಗಳಿಗೆ ಸಂಪೂರ್ಣ ಹಾನಿ, ೯೪ ಮನೆಗಳು ತೀವ್ರ ಹಾಗೂ ೫೦೨ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಳಿಯಾಳದಲ್ಲಿ ಮೂರು, ಹೊನ್ನಾವರ ಹಾಗೂ ಸಿದ್ದಾಪುರದಲ್ಲಿ ತಲಾ ಒಂದು ಸೇರಿದಂತೆ ಒಟ್ಟು ೫ ಜೀವ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.