ಕಾರವಾರ : ಏರ್ಕ್ರಾಫ್ಟ್ ಕ್ಯಾರಿಯರ್ ಐ.ಎನ್.ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ | JANATA NEWS
ಕಾರವಾರ : ಇಲ್ಲಿನ ಕದಂಬ ನೌಕಾನೆಲೆಯಲ್ಲಿರುವ ದೇಶದ ಅತೀ ದೊಡ್ಡ ಏರ್ಕ್ರಾಫ್ಟ್ ಕ್ಯಾರಿಯರ್ ಐ.ಎನ್.ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ಬಳಿಯ ಐ.ಎನ್.ಎಸ್ ಕದಂಬ ನೌಕಾನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ನಿನ್ನೆ 20 ಜುಲೈ ರಂದು ನೌಕೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯುದ್ಧ ನೌಕೆಯಲ್ಲಿದ್ದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ಆರಿಸಿದ್ದಾರೆ. ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ನೌಕಾಪಡೆಯ ಮೂಲಗಳು ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಅಗ್ನಿ ಅವಘಡದಿಂದಾದ ಹಾನಿಯ ನಿಖರವಾದ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.
ಈ ಬಗ್ಗೆ ಮಾತನಾಡಿರುವ ಭಾರತೀಯ ನೌಕಾಪಡೆ, ಕಾರವಾರದ ಸಮುದ್ರ ಪ್ರಯೋಗಗಳ ಯೋಜಿತ ಕಾರ್ಯಾಚರಣೆಯ ಸಂದರ್ಭದಲ್ಲಿ, ಐಎನ್ಎಸ್ನಲ್ಲಿ ಬೆಂಕಿಯ ಘಟನೆ ವರದಿಯಾಗಿದೆ. ವಿಕ್ರಮಾದಿತ್ಯ ಇಂದು 20 ಜುಲೈ 22. ಹಡಗಿನ ಸಿಬ್ಬಂದಿ ಆನ್ಬೋರ್ಡ್ ಸಿಸ್ಟಮ್ಗಳನ್ನು ಬಳಸಿಕೊಂಡು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಘಟನೆಯ ಕುರಿತು ತನಿಖೆ ನಡೆಸಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾಗಿದೆ.