ಅಕ್ರಮ ಆಸ್ತಿ ಗಳಿಕೆ: ಎಸಿಬಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್ ಖಾನ್ | JANATA NEWS
ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ರಿಗೆ ಎಸಿಬಿಯಿಂದ ಕರೆ ಬಂದಿದ್ದು, ಎಸಿಬಿ ಕಛೇರಿಗೆ ವಿಚಾರಣೆಗೆ ಇಂದು ಹಾಜರಾಗಿದ್ದಾರೆ.
ಜೂನ್ 5 ರಂದು ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು. ದಾಳಿ ವೇಳೆ ಹಲವು ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆ ಇಂದು ಎಸಿಬಿ ವಿಚಾರಣೆಗೆ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗಿದ್ದಾರೆ.
ದಾಳಿ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ದಾಳಿಯಲ್ಲಿ ಮನೆ, ಆಸ್ತಿ, ಆದಾಯದ, ಮೂಲ ಪತ್ತೆಯಾಗಿತ್ತು. ಅದಮತೋಲನ ಆಸ್ತಿ ಗಳಿಕೆ ಹಿನ್ನೆಲೆ ವಿಚಾರಣೆಗೆ 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ಇಂದು ಎಸ್ಪಿ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ಜಮೀರ್ ವಿಚಾರಣೆ ನಡೆಯುತ್ತಿದ್ದು, ಜಮೀರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಕಲಂ 13(1)(b)r/w13(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅಹಮದ್ ಖಾನ್ ಮೊದಲ ದಿನದ ವಿಚಾರಣೆಯಲ್ಲೇ ಶಾಕ್ ಕೊಟ್ಟಿದ್ದಾರೆ. ಆರಂಭದಲ್ಲಿ ಜಮೀರ್ ಖಾನ್ಗೆ ನೂರಕ್ಕೂ ಅಧಿಕ ಪ್ರಶ್ನೆಗಳನ್ನ ಎಸಿಬಿ ಅಧಿಕಾರಿಗಳು ಕೇಳಿದ್ದಾರೆ ಅನ್ನೋ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. 100 ಪ್ರಶ್ನೆಗಳಿಗೆ ಉತ್ತರವನ್ನು ಲಿಖಿತ ರೂಪದಲ್ಲಿ ನೀಡುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜೊತೆಗೆ ಉತ್ತರವನ್ನ ಬರೆದು ಕೊಡಲು ಒಬ್ಬ ಸಿಬ್ಬಂದಿಯನ್ನು ನೀಡಲಾಗಿದೆ. ಜಮೀರ್ ಈವರೆಗೆ ಗಳಿಕೆ ಮಾಡಿರುವ ಅಪಾರ ಪ್ರಮಾಣದ ಆಸ್ತಿಯ ಮೂಲದ ಕುರಿತು 100 ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ