ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು | JANATA NEWS
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೊಳುವಾರಿನಲ್ಲಿರುವ ಪ್ರಸಿದ್ಧ ಸುಧಾನ ಶಾಲೆಯ ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.
ಸುಧಾನ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದ ಮನೋಹರ್ ರೈ ಅವರ ಪುತ್ರ ಸುಶಾನ್ ರೈ ಎಂದು ಗುರುತಿಸಲಾಗಿದೆ. ಸುದಾನ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದೇ, ನೇರವಾಗಿ ವಸತಿ ಸಮುಚ್ಚಯಕ್ಕೆ ತೆರಳಿದ ಬಾಲಕ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಐದನೇ ಮಹಡಿಯಲ್ಲಿ ಸ್ಕೂಲ್ ಬ್ಯಾಗ್ ಇರಿಸಿದ್ದಾನೆ.
ಘಟನೆ ನಡೆದ ತಕ್ಷಣ ಅಲ್ಲಿದ್ದ ಸ್ಥಳೀಯರು ಸೇರಿ ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಸುಶಾನ್ ರೈ ಅವರು ಶಾಲೆಯಿಂದ ನೇರ ಮನೆಗೆ ಹೋಗದೆ ವಸತಿ ಸಮುಚ್ಚಯಕ್ಕೆ ಸಂಜೆ 4.20ರ ಸುಮಾರಿಗೆ ಒಳಗೆ ಬಂದಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಆ ಬಳಿಕ ಕೆಲವೇ ನಿಮಿಷದಲ್ಲಿ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಯಾವತ್ತೂ ಅಪಾರ್ಟ್ ಮೆಂಟ್ ಗೆ ತೆರಳದ ಬಾಲಕ ಘಟನೆ ನಡೆದ ದಿನ ಯಾವ ಕಾರಣಕ್ಕೆ ಹೋಗಿದ್ದಾನೆ ಎಂದು ತಿಳಿದುಬಂದಿಲ್ಲ.