ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು, ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ! | JANATA NEWS
ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು
ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಹಿಂದಿನ ವರ್ಷಗಳಂತೆಯೇ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಕೂಡಿಸುವಂತಿಲ್ಲ ಎಂದರು.
ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.