ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲ! | JANATA NEWS
ಬೆಂಗಳೂರು : ಕ್ವಿಟ್ ಇಂಡಿಯಾ ಚಳವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ, ಸನ್ಮಾನಿಸಿ, ಗೌರವಿಸಿದರು.
ಜೆಪಿ ನಗರದ 4ನೇ ಹಂತದ ಆಶ್ರಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿದ ಅವರು, ಆರ್. ನಾರಾಯಣಪ್ಪ ಅವರಿಗೆ ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರಿಗೆ ಪ್ರಮಾಣ ಪತ್ರ ನೀಡಿ, ನಮನ ಸಲ್ಲಿಸಿದರು. ಈ ವೇಳೆ ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಿದ್ದರು.
ಬಳಿಕ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶಂಕರನಾರಾಯಣ ರಾವ್ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು.
ಇದಾದ ನಂತರ ಮಲ್ಲೇಶ್ವಂರಂನಲ್ಲಿರುವ ನಾಗಭೂಷಣ್ ರಾವ್ ಮನೆಗೆ ತೆರಳಿದ ರಾಜ್ಯಪಾಲರು, ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ರಾಜ್ಯಪಾಲರು, ಮಾತನಾಡಿ ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು