ನಟನಿಂದ ಹನಿಟ್ರ್ಯಾಪ್, ಸ್ಯಾಂಡಲ್ವುಡ್ ಯುವ ನಟನ ಬಂಧನ! | JANATA NEWS
ಬೆಂಗಳೂರು : ಉದ್ಯಮಿಗೆ ಹನಿ ಟ್ರ್ಯಾಪ್ ಮಾಡಿದ್ದ ಹಿನ್ನೆಲೆ ಸ್ಯಾಂಡಲ್ವುಡ್ ಉದಯೋನ್ಮುಖ ನಟನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಗಿದ್ದಾನೆ. ಬಂಧಿತ ಯುವರಾಜ್, ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದರು. ನಂತರ ಉದ್ಯಮಿಗೆ ಯುವರಾಜ್ ಭೇಟಿಯಾಗಿ ನಾವು ಕ್ರೈಮ್ ಪೊಲೀಸರು ಎಂದು ಹೇಳಿ ಹೆದರಿಸಿದ್ದರು. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಕುರಿತು ನಿಮ್ಮ ಮೇಲೆ ಕೇಸ್ ದಾಖಲಾಗಿದೆ. ಈ ಕೇಸ್ ಮುಂದುವರೆಸದಿರಲು ಹಣ ನೀಡುವಂತೆ ಕೇಳಿದ್ದ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಮೊದಲಿಗೆ ಐವತ್ತು ಸಾವಿರ ಪಡೆದುಕೊಂಡು ನಂತರ ಮೂರು ಲಕ್ಷ ರೂಪಾಯಿ ಹಣವನ್ನ ಡ್ರಾ ಮಾಡಿಸಿಕೊಂಡಿದ್ದರು. ಅಷ್ಟಕ್ಕೂ ಸುಮ್ಮನಾಗದ ಯುವರಾಜ್, ಹಂತ ಹಂತವಾಗಿ 14 ಲಕ್ಷಕ್ಕೂ ಹೆಚ್ಚು ಹಣವನ್ನ ಪೀಕಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಉದ್ಯಮಿಗೆ ಡೌಟ್ ಬಂದಿತ್ತು. ಹೀಗಾಗಿ ಹಲಸೂರು ಠಾಣೆಗೆ ದೂರು ನೀಡಿದ್ದರು.
ದೂರಿನ ಅನ್ವಯ ಆರೋಪಿ ಯುವರಾಜ್ನನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ ಯುವರಾಜ್ ಮತ್ತು ಉದ್ಯಮಿಗೆ ಚಾಟ್ ಮಾಡಿದ್ದ ಯುವತಿ ಕವನಾ ಒಟ್ಟಿಗೆ ಫಿಟ್ನೆಸ್ ಶಾಪ್ ನಡೆಸುತ್ತಿದ್ದಾರೆ ಎಂದು ಶ್ರೀನಿವಾಸ್ ಗೌಡ ಹೇಳಿದ್ದಾರೆ.