ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರಿನ ತಾಯಿ-ಮಗ ಸಾವು, ತಂದೆ-ಮಗಳ ಸ್ಥಿತಿ ಗಂಭೀರ | JANATA NEWS
ಬೆಂಗಳೂರು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಇದರಲ್ಲಿ ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂವರು ವರ್ಷದ ಮಗ ಮೃತಪಟ್ಟಿದ್ದಾರೆ. ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಗಾಯತ್ರಿ (30) ಮತ್ತು ಮಗ ವಿಥುನ್ (3) ಎಂದು ಗುರುತಿಸಲಾಗಿದೆ. ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಟೈರ್ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಗಾಯಾಳು ತಂದೆ ಮತ್ತು ಮಗಳನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ
RELATED TOPICS:
English summary :Terrible road accident in Andhra Pradesh: Bengaluru mother-son dead, father-daughter condition critical