ಕೊಡಲಿಯಿಂದ ಪತ್ನಿ ಕೊಲೆಗೈದು ಠಾಣೆಗೆ ಬಂದು ಶರಣಾದ ಪತಿ! | JANATA NEWS
ರಾಯಚೂರು: : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೇ ಪತ್ನಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.
ಗುಡದನಾಳ ಗ್ರಾಮದ ಜೆಟ್ಟೆಪ್ಪ ತನ್ನ ಹೆಂಡತಿ ರೇಣುಕಾಳನ್ನು (26 ) ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸಂಬುಡ ಗ್ರಾಮದ ರೇಣುಕಾಳ ಮದುವೆ 6-7 ವರ್ಷಗಳ ಹಿಂದೆ ನಡೆದಿತ್ತು. ಕೊಲೆಯಾದ ರೇಣುಕಾ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.
ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಇಂದು ಬೆಳಗ್ಗೆ ಸಹ ಇದೇ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ವೇಳೆ ಮನೆಯಲ್ಲಿದ್ದ ಕೊಡಲಿಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ನಂತರ ಜೆಟ್ಟಪ್ಪ ಮಕ್ಕಳೊಂದಿಗೆ ಲಿಂಗಸೂಗುರು ಠಾಣೆಗೆ ಬಂದು ಶರಣಾಗಿದ್ದಾನೆ.