ಕೆಲಸ ಕೊಡಿಸೋದಾಗಿ ಹೇಳಿ ವೇಶ್ಯಾವಾಟಿಕೆಗೆ ನೂಕಿದ ಪ್ರಿಯಕರ ಸೇರಿದಂತೆ ಮೂವರ ಬಂಧನ | JANATA NEWS
ಬೆಂಗಳೂರು : ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ತಂದು ವೇಶ್ಯವಾಟಿಗೆ ದಂಧೆಗೆ ನೂಕಿದ್ದ ಗ್ಯಾಂಗ್ನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ.
ಮಂಜುಳ, ಬ್ರಹ್ಮೇಂದ್ರ, ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡ ಬಂಧನ ಮಾಡಲಾಗಿದೆ.
ಯುವತಿ ಮಂಡ್ಯ ಮೂಲದವಳಾಗಿದ್ದು, ಮೂರ್ನಾಲ್ಕು ವರ್ಷಗಳ ಹಿಂದೆ ಆಕೆಯ ಪ್ರಿಯಕರನೇ ಕೆಲಸ ಕೊಡಿಸೋದಾಗಿ ಹೇಳಿ ಮಂಡ್ಯದಿಂದ ಬೆಂಗಳೂರಿಗೆ ಕರೆ ತಂದಿದ್ದನು. ನಂತರ ಮಂಜುಳಾ ಎಂಬ ಮಹಿಳೆಯ ಬಳಿ ಬಿಟ್ಟಿದ್ದನು, ಮಂಜುಳ ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ಈ ವೇಳೆ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ನ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.