ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ | JANATA NEWS
ಹುಬ್ಬಳ್ಳಿ : ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಅಂತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮುತಾಲಿಕ್, ಬಿಜೆಪಿಯವರಿಗೆ ಚರ್ಚೆಗೆ ಬೇರೆ ವಿಷಯವೇ ಇಲ್ಲ. ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ಯಾವುದೆ ತಪ್ಪಿಲ್ಲ. ಮಾಂಸಾಹಾರ ಸೇವಿಸಿ ದೇವಸ್ಥಾನ ಹೋಗಿದ್ದು ತಪ್ಪಲ್ಲ.
ಹಿಂದೂಗಳಲ್ಲಿಯೂ ಸಾಕಷ್ಟು ಜನ ಮಾಂಸಾಹಾರಿಗಳಿದ್ದಾರೆ. ಹಿಂದು ದೇವರುಗಳಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ, ಅದರಲ್ಲೇನೂ ತಪ್ಪಿದೆ. ದೇವರ ಮುಂದೆಯೇ ಕುರಿ ಕಡಿದು ತಿನ್ನುತ್ತಾರೆ. ಕುರಿ ಕಡಿದು ಪ್ರಸಾದ ತೆಗೆದುಕೊಳ್ಳುತ್ತಾರೆ. ಇದರಲ್ಲಿ ಏನು ತಪ್ಪಿದೆ? ಇದು ಚರ್ಚೆ ಮಾಡುವ ವಿಷಯವೇ ಅಲ್ಲ. ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದಿದ್ದಾರೆ.
ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ. ತಾಕತ್ ಇದ್ರೆ ಅದೇನ್ ಮಾಡ್ಕೋತಿರೋ ನಾವು ನೋಡ್ತೀವಿ ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.