ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ! | JANATA NEWS
ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲೇನಿದೆ?
ಅರ್ಜಿ ಬಂದ 3 ದಿನಗಳ ಒಳಗೆ ಪರವಾನಗಿಯನ್ನು ಪಡೆಯಬೇಕು.
ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶನನ್ನು ಕೂರಿಸುವಂತಿಲ್ಲ.
ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಬೇಕು.
ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
ಸ್ಥಳೀಯ ನಾಗರೀಕರ ಜೊತೆ ಸೌಹಾರ್ಧಯುತ ಸಭೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.