ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ | JANATA NEWS
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನದ ಮಾಲೀಕತ್ವ ವಿವಾದ ಸಂಬಂಧ, ಇಂದು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ & ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶ ನೀಡಲಾಗಿದೆ. ಹಾಗೂ ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಹಾಗೂ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ಧಂತ ವಿಭಾಗಿಯ ಪೀಠವು, ಚಾಮರಾಜಪೇಟೆಯ ಈದ್ಗಾ ಮೈದಾನ ಮಾಲೀಕತ್ವ ವಿವಾದ ಕುರಿತಂತೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿತು.