ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ! | JANATA NEWS
ಚಿತ್ರದುರ್ಗ : ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಜಿಲ್ಲಾ 2ನೇ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಶ್ರೀಗಳ ಪರ ವಕೀಲರು ಚಿತ್ರದುರ್ಗಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲವು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್.1ಕ್ಕೆ ರಂದು ನಡೆಸುವುದಾಗಿ ತಿಳಿಸಿದೆ...
ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಶಿವಮೂರ್ತಿ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ.
ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿ ಇಂದು ಮುರುಘಾ ಶರಣರು, ಮಠದ ಭಕ್ತರನ್ನ ಉದ್ದೇಶಿಸಿ ಮಾತನಾಡಿದರು. ನಮ್ಮ ನೋವು, ಮಠದ ನೋವು ಒಂದೇ ಎಂದು ಭಾವಿಸಿರುವ ಭಕ್ತರು, ಬೆಂಬಲಿಗರು ಹಾಗೂ ಸಮಾಜ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದರು.
ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಎಂದರು.
ಮುರುಘಾ ಮಠ ಚಲಿಸುವ ನ್ಯಾಯಾಂಗವಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಎಲ್ಲರನ್ನೂ ನಾವುಗಳು ಪ್ರೀತಿಯಿಂದ, ಅಕ್ಕರೆಯಿಂದ ನೋಡಿಕೊಂಡು ಬಂದಿದ್ದೇವೆ. ಅನಾರೋಗ್ಯಕರ ಸಂದರ್ಭದಿಂದ ಹೊರಗಡೆ ಬಂದೇ ಬರ್ತೀವಿ. ಎಲ್ಲರಿಗೂ ಶುಭವಾಗಲಿ. ಶ್ರೀಮಠದ ನೋವಿನ ಜೊತೆಯಲ್ಲಿ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಇದನ್ನ ನಾವು ಗೌರವಿಸುತ್ತೇವೆ ಎಂದರು.