Thu,May02,2024
ಕನ್ನಡ / English

ಮಂಡ್ಯ ಹನಿಟ್ರ್ಯಾಪ್: ಆಡಿಯೋ ವೈರಲ್ ಆದ ಬೆನ್ನಲ್ಲೇ ಯುವತಿ ಜೊತೆ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಚಿನ್ನದ ವ್ಯಾಪಾರಿ | JANATA NEWS

08 Sep 2022
1917

ಮಂಡ್ಯ : ಮಂಡ್ಯದ ಚಿನ್ನದ ವ್ಯಾಪಾರಿಯ ಹನಿಟ್ರ್ಯಾಪ್ ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ.

ಚಿನ್ನದ ಅಂಗಡಿ ಮಾಲೀಕ, ಬಿಜೆಪಿ ಮಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಸಲ್ಮಾ ಭಾನು ವಿರುದ್ಧ ಕೇಸ್‌ ದಾಖಲಾಗಿದ್ದು, ಆಕೆಯನ್ನು ಪೊಲೀಸು ಅರೆಸ್ಟ್ ಸಹ ಮಾಡಿದ್ದಾರೆ. ಆದರೆ, ಇದೀಗ ಇದೇ ಬಿಜೆಪಿ ಮಖಂಡ ಜಗನ್ನಾಥ ಶೆಟ್ಟಿ ಯುವತಿಯೊಂದಿಗೆ ಲಾಡ್ಜ್‌ವೊಂದರಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ವಿಡಿಯೋ ಫುಲ್ ವೈರಲ್ ಅಗಿದೆ.

ಕಾಲೇಜ್ ಲೆಕ್ಚರರ್ ಎಂದು ಹೇಳಿಕೊಂಡು ಟ್ಯೂಷನ್‌ ಹೇಳಿಕೊಡುತ್ತೇನೆ ಎಂದ ಯುವತಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾರೆ. ಯುವತಿ ಜೊತೆ ಜಗನ್ನಾಥ್ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಗ್ಯಾಂಗ್​​ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್‌ಗೆ ನುಗ್ಗಿದ್ದಾರೆ. ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ, ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಯುವತಿಯೊಂದಿಗೆ ಇರುವ ವಿಡಿಯೋ ಫುಲ್ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್​ ಮಾಲೀಕ ಜಗನ್ನಾಥ್ ಶೆಟ್ಟಿ ಮೈಸೂರಿನ ಲಾಡ್ಜ್‌ವೊಂದರಲ್ಲಿ ಯುವತಿಯೊಂದಿಗೆ ಇರುವುದರನ್ನು ಸಲ್ಮಾ ಗ್ಯಾಂಗ್ ರೆಡ್​ ಹ್ಯಾಂಡ್‌ ಆಗಿ ಹಿಡಿದಿದೆ.

ಈ ಎಲ್ಲಾ ವೀಡಿಯೋ ವೈರಲ್ ಆಗುವ ಮುನ್ನವೇ ಜಗನ್ನಾಥಶೆಟ್ಟಿ ಸಲ್ಮಾ ಮತ್ತು ತಂಡದ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಗಳೂರಿಗೆ ಹೋಗಲೆಂದು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಜಗನ್ನಾಥ್ ರನ್ನು ಮೈಸೂರಿಗೆ ಡ್ರಾಪ್ ಕೊಡುವುದಾಗಿ ನಾಲ್ವರು ಕಾರಿನಲ್ಲಿ ಕರೆದೊಯ್ದು ನಂತರ ಚಿನ್ನದ ಪರೀಕ್ಷೆಗೆಂದು ನನ್ನನ್ನು ಅಪಹರಿಸಿ ಲಾಡ್ಜ್‌ಗೆ ಕರೆದೊಯ್ದು ಕೂಡಿಹಾಕಿದ್ದರು.

ಬಳಿಕ ಯುವತಿಯೊಬ್ಬಳನ್ನು ಕೊಠಡಿಗೆ ಕಳುಹಿಸಿ, ಈಕೆಯೊಂದಿಗೆ ಏಕೆ ಬಂದಿದ್ದೀಯಾ ಎಂದು ಹಲ್ಲೆ ನಡೆಸಿದರು. ನಂತರ 50 ಲಕ್ಷರೂ ಕೊಡಬೇಕು ಇಲ್ಲದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಇದರಿಂದ ಆತಂಕಗೊಂಡ ನಾನು ನನ್ನ ಸ್ನೇಹಿತರಾದ ಶ್ರೀನಿವಾಸಶೆಟ್ಟಿ ಮತ್ತು ಇತರರಿಂದ ಹಣ ತರಿಸಿಕೊಟ್ಟಿದ್ದಾಗಿ ದೂರಿನಲ್ಲಿ ತಿಳಿಸಿದ್ದರು.

ಈ ಹಿಂದೆ ಹನಿಟ್ರ್ಯಾಪ್ ಕೇಸ್ ನೀಡಿದ್ದ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

RELATED TOPICS:
English summary :Mandya Honeytrap: Gold trader caught red-handed with young woman after audio goes viral

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...