ಬೆಂಗಳೂರಲ್ಲಿ ಮಳೆ ಹಾನಿ: ಸಿದ್ದರಾಮಯ್ಯ ಪರಿಶೀಲನೆ, ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ | JANATA NEWS
ಬೆಂಗಳೂರು : ಇಂದು ಮಳೆ ಹಾನಿ ಪ್ರದೇಶ ವೀಕ್ಷಣೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ಹಾಕಿ ಪರಿಶೀಲನೆ ನಡೆಸಿದರು.
ಮಳೆಯಿಂದ ಜಲಾವೃತವಾಗಿರುವ ಬೆಂಗಳೂರಿನ ಬೆಳ್ಳಂದೂರು ರಿಂಗ್ ರಸ್ತೆಯ ಎಕೋ ಸ್ಪೇಸ್ ಬಡಾವಣೆಗೆ ಸಿದ್ದರಾಮಯ್ಯ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿದರು. ಸಿದ್ದರಾಮಯ್ಯಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರ ಮುಖಂಡರು ಸಾಥ್ ನೀಡಿದರು.
ಈ ವೇಳೆ ಅವರು ನಗರದಲ್ಲಿ ಕಳೆದ ಮೂರು ದಿನಗಳ ಕಾಲ ಜಾಸ್ತಿ ಮಳೆಯಾಗಿದೆ. ಇದರಿಂದಾಗಿ ಅನೇಕ ಬಡಾವಣೆಗಳಲ್ಲಿ ನೀರು ತುಂಬಿಕೊಂಡು ಬೋಟ್ ನಲ್ಲಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿಂದೆ ಬೋಟ್ನಲ್ಲಿ ತಿರುಗಾಡುವ ಪರಿಸ್ಥಿತಿ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರವಿದ್ದಾಗ ರಾಜಕಾಲುವೆಗಳನ್ನು ತೆರವುಗೊಳಿಸುವ ಕ್ರಮ ಕೈಗೊಂಡಿದ್ದೇವೆ. ಆದರೆ ಈಗಿನ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನಮ್ಮ ಸರ್ಕಾರದಲ್ಲಿ 1953 ಒತ್ತುವರಿ ಜಾಗವನ್ನು ನಾವು ಐಡೆಂಟಿಟಿ ಮಾಡಿದ್ದೇವೆ. 1,300 ಒತ್ತುವರಿ ಜಾಗವನ್ನು ತೆರವು ಮಾಡಿದ್ದೀವಿ ಎಂದರು