ಹಳೇ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ಮಾರಾಣಾಂತಿಕ ಹಲ್ಲೆ | JANATA NEWS
ಬೆಂಗಳೂರು : ಹಾಡಹಗಲೇ ಹಳೆ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿರೋ ಘಟನೆ ನಗರದ ಮಂತ್ರಿ ಮಾಲ್ ಬಳಿ ಇರುವ ನಟರಾಜ ಥಿಯೇಟರ್ ಎದುರು ನಡೆದಿದೆ.
ಗಣೇಶ್ ಅಲಿಯಾಸ್ ಕುಂದಾಪ್ರಿ ಗಣೇಶ್ ಎಂಬ ವ್ಯಕ್ತಿ ಮೇಲೆ ದಾಳಿ ಮಾಡಲಾಗಿದೆ. ಬೆಳಗ್ಗೆ 8ರ ಸುಮಾರಿಗೆ ಆಟೋದಲ್ಲಿ ಬಂದಿದ್ದ ನಾಲ್ವರು ರೌಡಿಶೀಟರ್ ಗಣೇಶ್ ಮೇಲೆ ಲಾಂಗ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡು ಬಿದ್ದಿದ್ದವನನ್ನ ಕಂಡು ಸ್ಥಳೀಯರು ಪೊಲೀಸರಿಗೆ ಹಾಗೂ ಆ್ಯಂಬುಲೆನ್ಸ್ಗೆ ಕರೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :Fatal assault on a person with firearms in the background of an old feud