ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು, ಊಹಾಪೋಹಗಳಿಗೆ ಕಿವಿಗೊಡದಂತೆ ಸಂದೇಶ | JANATA NEWS
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಕೆ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಅವರಿಗೆ ತೀವ್ರವಾದ ಉಸಿರಾಟದ ಸೋಂಕು ಇದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಡಾ.ಸತ್ಯನಾರಾಯಣ್ ಮತ್ತು ಡಾ.ಸುನೀಲ್ ಕಾರಂತ್ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ ಸುಧಾಕರ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಎಂ ಕೃಷ್ಣ ನಿವಾಸದಿಂದ ಸಂದೇಶ ಬಂದಿದ್ದು, ಎಸ್ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ ನಂತರ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ಯಾವುದೇ ಊಹಾಪೊಹದ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಎಸ್ ಎಂ ಕೃಷ್ಣ ರವರ ಪರವಾಗಿ ಕೊರುತ್ತೇನೆ ಹಾಗೂ ಮಾಧ್ಯಮ ಮಿತ್ರರು ಆಸ್ಪತ್ರೆಯ ಬಳಿ ಮಾಹಿತಿಗಾಗಿ ಬರಬಾರದೆಂದು ಕೋರುತ್ತೇನೆ ಎಂದು ಎಸ್ ಎಂ ಕೃಷ್ಣ ಅವರ ಕಚೇರಿ ಪ್ರಕಟಣೆ ಹೊರಡಿಸಿದೆ.