ಆಸ್ಪತ್ರೆಗೆ ಭೇಟಿ ಮಾಡಿ ಎಸ್ ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಡಿ.ಕೆ. ಶಿವಕುಮಾರ್ | JANATA NEWS
ಬೆಂಗಳೂರು : ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೈಸೂರಿಗೆ ತೆರಳಲು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಮಣಿಪಾಲ ಆಸ್ಪತ್ರೆಗೆ ಬೆಳಗ್ಗೆ ಭೇಟಿ ನೀಡಿದ ಶಿವಕುಮಾರ್ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ. ಕೃಷ್ಣ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದರು. ವೈದ್ಯರು ಎಸ್ಎಂ ಕೃಷ್ಣರವವರಿಗೆ ವಿಶ್ರಾಂತಿಯನ್ನು ಪಡೆದುಕೊಳ್ಳಲು ಸೂಚನೆಯನ್ನು ನೀಡಿದ್ದಾರೆ. ಇದರಿಂದಾಗಿ ಎಸ್ಎಂಕೆ ಬಳಿಯಲ್ಲಿ ಡಿಕೆಶಿಯು ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ.
"ಎಸ್.ಎಂ ಕೃಷ್ಣ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅವರ ವಿಶ್ರಾಂತಿಗೆ ಧಕ್ಕೆಯಾಗದಂತೆ ಸದ್ಯ ಯಾರೂ ಅವರ ಭೇಟಿಗೆ ಬರಬಾರದು" ಎಂದು ಶಿವಕುಮಾರ್ ಕೃಷ್ಣ ಅವರ ಪರವಾಗಿ ಮನವಿ ಮಾಡಿದ್ದಾರೆ.