ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ, ನೋವಿನಲ್ಲೂ ಅಂಗಾಂಗ ದಾನ ಮಾಡಿದ ಪಾಲಕರು | JANATA NEWS
ಬೆಂಗಳೂರು : ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬ ನೋವಿನಲ್ಲಿಯೂ ಸಾರ್ಥಕತೆ ಮೆರೆದಿದೆ.
ಯುವಕ ದೀಪಕ್ (26) ಅಂಗಾಂಗವನ್ನು ದಾನ ಮಾಡುವ ಮೂಲಕ ಕುಟುಂಸ್ಥರು ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಗಂಗೊಂಡನಹಳ್ಳಿಯ ದೀಪಕ್ ಸೆ.25 ರಂದು ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ನಿಂತಿದ್ದ ಕ್ಯಾಂಟರಿಗೆ ದೀಪಕ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಭೀಕರ ಅಪಘಾತದಲ್ಲಿ ದೀಪಕ್ ಮೆದುಳಿಗೆ ಬಲವಾದ ಪೆಟ್ಟು ಬಿದ್ದು ನಿಷ್ಕ್ರಿಯಗೊಂಡಿತ್ತು.
ಸಾವಿನ ನೋವಲ್ಲೂ ದೀಪಕ್ ಅವರ ಕಿಡ್ನಿ, ಕಣ್ಣು ಹಾಗೂ ಚರ್ಮ ಸೇರಿದಂತೆ ಹಲವು ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
English summary :In an accident, the brain of the young man was disabled, the parents donated the organ despite the pain