ತಂಗಿಯನ್ನ ಚುಡಾಯಿಸಿದ್ದಕ್ಕೆ ಯುವಕನ 50ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರ ಹತ್ಯೆ | JANATA NEWS
ಚಿಕ್ಕಬಳ್ಳಾಪುರ : ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ.
ಕೊಲೆಯಾದ ಯುವಕ ನಂದನ್ (21) ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಮೂಲದ ನಿವಾಸಿಯಾಗಿದ್ದಾನೆ. ದರ್ಶನ್ ಹಾಗೂ ಆತನ ಸ್ನೇಹಿತ ಆಶ್ರಯ್ ಎಂಬಿಬ್ಬರು ಯುವಕನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ.
ಮೃತ ನಂದಾ, ಆರೋಪಿ ದರ್ಶನ್ ಸಹೋದರಿಯನ್ನು ತಂಗಿಯನ್ನ ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ಹೇಳಲಾಗುತ್ತಿದೆ.
ದರ್ಶನ್ ಕೊಲೆಯಾದ ಯುವಕ ನಂದಾನಿಗೆ ಹಲವು ಬಾರಿ ವಾರ್ನಿಂಗ್ ಮಾಡಿ ತನ್ನ ತಂಗಿಯ ಫೋಟೋ ಡಿಲೀಟ್ ಮಾಡುವಂತೆ ಹೇಳಿದ್ದನಂತೆ. ಆದರೆ ದರ್ಶನ್ ಮಾತಿಗೆ ನಂದಾ ತಲೆ ಕೊಡಿಸಿಕೊಂಡಿರಲಿಲ್ಲ ಎನ್ನಲಾಗಿದೆ.
ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.