ಭಾರೀ ಮಳೆಗೆ ಗೋಡೆ ಕುಸಿತ: 5 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ಮೂವರು ಸಾವು | JANATA NEWS
ರಾಯಚೂರು : ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ನಡೆದಿದೆ.
ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ ಪತ್ನಿ ಜಯಮ್ಮ(39) ಹಾಗೂ ಪರಮೇಶನ ತಮ್ಮನ ಮಗ ಭರತ್(5) ಮೃತ ದುರ್ದೈವಿಗಳು.
ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಮಳೆಯಾಗುತ್ತಿದೆ. ನಿರಂತರ ಮಳೆಗೆ ಪರಮೇಶ ಅವರ ಮನೆಯ ಗೋಡೆ ಕುಸಿದಿದೆ.
ಇಂದು ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿತ ಸಂಭವಿಸಿದ್ದು, ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪುಟ್ಟ ಮಗು ಭರತ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
English summary :Wall collapse due to heavy rain: 5-year-old Kandamma among three of the same family died