ರಾಜ್ಯದಲ್ಲಿ ಮಳೆ, ಕೊರೋನಾ ಬಗ್ಗೆ ಕೋಡಿ ಶ್ರೀ ಆತಂಕಕಾರಿ ಭವಿಷ್ಯ | JANATA NEWS
ಧಾರವಾಡ : ದೇಶದಲ್ಲಿ ಮತ್ತೆ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ ಎಂದು ಧಾರವಾಡದಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.
ಈ ಸಂವತ್ಸರದ ಪ್ರಾರಂಭದಲ್ಲಿಯೇ ನಾನು ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು ನೋವು ಆಗುತ್ತೆ ಅಂತಾ ಹೇಳಿದ್ದೇವು. ಈಗ ಹಾಗೇ ಆಗಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.
ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗುಡಾಯಿಸುತ್ತದೆ. ಕಾಡಿನಿಂದ ನಾಡಿಗೆ ಪ್ರಾಣಿಗಳ ಪ್ರವೇಶ ಆಗುತ್ತವೆ. ಭೂಮಿಯೊಳಗೆ ವಿಷಜಂತುಗಳು ಹೊರಗೆ ಬಂದು ತೊಂದರೆ ಮಾಡುತ್ತವೆ. ಹೊರಗಡೆ ಹೋಗುವಾಗ ಒಂದು ಬಡಗಿ ಹಿಡಿದುಕೊಂಡು ಹೋಗಬೇಕು ಎಂದು ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಮತ್ತಷ್ಟು ಅವಘಡಗಳು ಹೆಚ್ಚಾಗಲಿವೆ. ಪ್ರಕೃತಿಯ ಮುನಿಸು ಹೆಚ್ಚಾಗಿ, ಅಲ್ಲೋಲ ಕಲ್ಲೋಲವೇ ಉಂಟಾಗಲಿದೆ. ಅಪಮೃತ್ಯುಗಳ ಸಂಖ್ಯೆ ಹೆಚ್ಚಲಿದೆ. ಬೆಂಕಿಯಿಂದ ಹೆಚ್ಚು ಹೆಚ್ಚು ಸಮಸ್ಯೆಯಾಗಲಿವೆ ಎಂಬುದಾಗಿ ತಿಳಿಸಿದ್ದಾರೆ.