ಸಿಎಂ ಬೊಮ್ಮಾಯಿಗೆ ಮೆಚ್ಯೂರಿಟಿಯೇ ಇಲ್ಲ; ನಾನು ಇದನ್ನು ಇಲ್ಲಿಗೇ ಬಿಡಲ್ಲ; ಹೆಚ್.ಡಿ. ಕುಮಾರಸ್ವಾಮಿ | JANATA NEWS
ಬೆಂಗಳೂರು : ನನ್ನ ಮೆಚ್ಯೂರಿಟಿ ಬಗ್ಗೆ ಮಾತನಾಡುವ ಸಿಎಂ ಬೊಮ್ಮಾಯಿ ಅಪ್ರಬುದ್ಧರು. ಅವರಿಗೆ ಮೆಚ್ಯೂರಿಟಿಯೇ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು.
ಕಲಾವಿದರ ಕೋಟಾದಲ್ಲಿ ಆಯ್ಕೆಯಾದವರಿಗೆ 50 ಕೋಟಿ ಅನುದಾನ ಕೊಟ್ಟ ಉದಾಹರಣೆ ಎಲ್ಲಾದರೂ ಇದೆಯಾ ? ಯಾವ ಉದ್ದೇಶಕ್ಕಾಗಿ ಅನುದಾನ ಕೊಟ್ಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ.
ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಪ್ರಕರಣದ ಬಗ್ಗೆ ಮಾತನಾಡಿದ್ದ ಸಿಎಂ ನಾವೆಲ್ಲರೂ ಮೆಚ್ಯೂರ್ಡ್ ಆಗಿದ್ದೇವೆ ಎಂದಿದ್ದಾರೆ. ಹೆಚ್.ಡಿ.ಕೆ. ಗೆ ಮೆಚ್ಯೂರಿಟಿ ಇಲ್ಲ ಎಂದಿದ್ದಾರೆ. ನನ್ನ ಮೆಚ್ಯೂರಿಟಿ ಬಗ್ಗೆ ಮಾತಾಡ್ತಾರಾ ? ಸಿಎಂ ಬೊಮ್ಮಾಯಿ ಅಪ್ರಬುದ್ಧರು..
ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ, ತಾಕತ್ತಿದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ಪ್ರಶ್ನಿಸಿದ್ದಾರೆ.