ವಿಧಾನಸೌಧಕ್ಕೆ ಬಾಂಬ್ ಇಟ್ಟಿದ್ದೀನಿ ಎಂದು ಕರೆ ಮಾಡಿದ್ದ ಸಾಪ್ಟ್ವೇರ್ ಇಂಜಿನಿಯರ್ ಬಂಧನ | JANATA NEWS
ಬೆಂಗಳೂರು : ವಿಧಾನಸೌಧಕ್ಕೆ ಕರೆ ಮಾಡಿ ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಬೆದರಿಸಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಧಾನಸೌಧ ಸಿಎಸ್ ಕಚೇರಿಯ ನಂಬರ್ ಗೂಗಲ್ ನಲ್ಲಿ ಸರ್ಚ್ ಮಾಡಿ, ನಂಬರ್ ತೆಗೆದುಕೊಂಡು ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಮೂರು ಬಾರಿ ಕರೆ ಮಾಡಿದ್ದಾನೆ.
ವಿಧಾನಸೌಧಲ್ಲಿ ಬಾಂಬ್ ಇಟ್ಟಿದ್ದು, ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಳ್ಳುತ್ತೆ ಎಂದು 3 ಬಾರಿ ಕರೆ ಮಾಡಿ ಕಟ್ ಮಾಡಿದ್ದಾನೆ. ಕೂಡಲೆ ಕಚೇರಿ ಸಿಬ್ಬಂದಿ ವಿಧಾನಸೌಧ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಕೇಂದ್ರ ವಿಭಾಗ ಪೊಲೀಸರು ಪೋನ್ ಕಾಲ್ ಮಾಹಿತಿ ಆಧರಿಸಿ ವಿಧಾನಸೌಧದಲ್ಲಿ ಒಂದು ವಿಶೇಷ ತಂಡ ರಚಿಸಿ ಪರಿಶೀಲನೆ ಮಾಡಿದ್ದಾರೆ.
ನಂತರ ಬಾಂಬ್ ನಿಷ್ಕ್ರೀಯ ದಳವನ್ನ ಬಂದು ಪರಿಶೀಲಿಸಿದೆ. ಈ ವೇಳೆ ಇದೊಂದು ಹುಸಿ ಬಾಂಬ್ ಕರೆ ಎಂಬುವುದು ತಿಳಿದಿದೆ.
ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಶಾಂತ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ, ಆತ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು ರಾಜ್ಯದ ವ್ಯವಸ್ಥೆ ವಿರುದ್ಧ ಅಸಮಧಾನಗೊಂಡು ದುಷ್ಕೃತ್ಯಕ್ಕೆ ಕೈ ಹಾಕಿದ್ದಾನೆ ಎನ್ನಲಾಗಿದೆ