ಅಪ್ಪು ಮನಸ್ಸಿಗೆ ಹತ್ತಿರವಾದ ಗಂಧದ-ಗುಡಿ ಚಿತ್ರಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ | JANATA NEWS
ನವದೆಹಲಿ : ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಬಹುದಿನದ ಕನಸು ಹಾಗೂ ಅವರ ಮನಸ್ಸಿಗೆ ತುಂಬಾ ಹತ್ತಿರವರ ಯೋಜನೆಯೂ ಆದ ಗಂಧದಗುಡಿ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು, ಎಂದು ಪ್ರಧಾನಿ ಮೋದಿ ಸರಣಿ ಟ್ವೀಟ್ ಗಳ ಮೂಲಕ ಶುಭ ಹಾರೈಸಿದ್ದಾರೆ.
ಪ್ರಪಂಚಾದ್ಯಂತ ಕೋಟ್ಯಾಂತರ ಅಭಿಮಾನಿ ದೇವರುಗಳ ಅಚ್ಚುಮೆಚ್ಚಿನ ಅಪ್ಪು ಕಳೆದ ವರ್ಷ ಅಕ್ಟೋಬರ್ 29ರಂದು ಹೇಲೋಕ ತ್ಯಜಿಸಿದ್ದು ಇದೇ ಬರುವ ಅಕ್ಟೋಬರ್ 28ರಂದು ಚಿತ್ರ ಗಂಧದಗುಡಿಯನ್ನು ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಪುನೀತ್ ರಾಜಕುಮಾರ್ ಅವರ ಧರ್ಮ ಪತ್ನಿ ಹಾಗೂ ಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವಿಷಯ ಹಂಚಿಕೊಂಡಿದ್ದರು
ನಮಸ್ತೆ ನರೇಂದ್ರ ಮೋದಿ ಅವರೇ, ಅಪ್ಪು ಅವರ ಹೃದಯಕ್ಕೆ ಹತ್ತಿರವಾದ ಪ್ರಾಜೆಕ್ಟ್ #ಗಂಧದಗುಡಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡುತ್ತಿರುವ ನಮಗೆ ಇಂದು ಭಾವನಾತ್ಮಕ ದಿನ. ಅಪ್ಪು ಯಾವಾಗಲೂ ನಿಮ್ಮೊಂದಿಗಿನ ಮಾತುಕತೆಗಳನ್ನು ಆಹ್ಲಾದಿಸುತ್ತಿದ್ದರು ಮತ್ತು ನಿಮ್ಮೊಂದಿಗೆ ವೈಯಕ್ತಿಕವಾಗಿ ಹಂಚಿಕೊಳ್ಳಲು(ಚಿತ್ರದ ಟ್ರೈಲರ್ ಲಿಂಕ್) ಇಷ್ಟಪಡುತ್ತಿದ್ದರು.
ಅಪ್ಪು ನಮ್ಮ ಮಧ್ಯೆ ಇಲ್ಲ, ಆದರೆ ಅವರ ಜೀವನ ಮತ್ತು ಕೆಲಸವು ನಮಗೆ "ವಸುಧೈವ ಕುಟುಂಬಕಂ" ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ ಮತ್ತು ಶಕ್ತಿಯನ್ನು ನೀಡುತ್ತದೆ. #GGMovie ಸಿನಿಮಾವನ್ನು ಆಚರಿಸುತ್ತದೆ ಮತ್ತು ನಮ್ಮ ನೆಲದ ಶ್ರೀಮಂತ ಪರಂಪರೆ, ಸಂಸ್ಕೃತಿ, ಪ್ರಕೃತಿ ಮತ್ತು ವೈವಿಧ್ಯತೆಗೆ ಕನ್ನಡಿ ಹಿಡಿದಿದೆ, ಎಂದು ಅಶ್ವಿನಿ ಪುನೀತ್ ಕುಮಾರ್ ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಗಂಧದಗುಡಿ ಚಿತ್ರದ ಟ್ರೈಲರ್ ಲಿಂಕ್ ಹಂಚಿಕೊಂಡು ಟ್ವೀಟ್ ಮಾಡಿದ್ದರು.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು. https://t.co/VTimdGmDAM
— Narendra Modi (@narendramodi) October 9, 2022