ಸಲಿಂಗಕಾಮಕ್ಕೆ ಕರೆದೊಯ್ದು ಹಣ ಕೇಳಿದ್ದಕ್ಕೆ ವೃದ್ಧನ ಕೊಲೆಗೈದ ಯುವಕ | JANATA NEWS
ಮಂಗಳೂರು : ಸಲಿಂಗ ಕಾಮಕ್ಕೆ ಕರೆದೊಯ್ದು ನಂತರ ಹಣ ಕೇಳಿದ್ದ ವೃದ್ಧರೊಬ್ಬರನ್ನು ಯುವಕನೊರ್ವ ಕೊಲೆ ಮಾಡಿದ ಘಟನೆ ಮಂಗಳೂರಿನ ಹರಿಪದವು ಎಂಬಲ್ಲಿ ನಡೆದಿದೆ.
ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ.
ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟ ಹೊಂದಿದ್ದರು. ರಾಜೇಶ್ ಪೂಜಾರಿ ನಗರದ ಲಾಲ್ ಬಾಗ್ನಲ್ಲಿರುವ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಜಯಾನಂದರನ್ನು ಆರೋಪಿ ರಾಜೇಶ್ ಪೂಜಾರಿ ಕಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಸಲಿಂಗಕಾಮ ಮಾಡಿದ್ದಾರೆ.
ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ. ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.