ಮುರುಘಾಶ್ರೀಗಳಿಂದ ಪವರ್ ಆಫ್ ಅಟಾರ್ನಿ ಹಸ್ತಾಂತರ | JANATA NEWS
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಮಠದ ಮುರುಘಾ ಶ್ರೀಗಳು ಜೈಲಿನಲ್ಲಿರುವ ಹಿನ್ನೆಲೆ ವಿವಿಧ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲು ತೊಂದರೆಯಾಗಿತ್ತು. ಹೀಗಾಗಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಪವರ್ ಆಫ್ ಅಟಾರ್ನಿ ಜಾರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.
ಈ ಹಿನ್ನೆಲೆ ಪ್ರಮುಖ ನಿರ್ಧಾರ ಕೈಗೊಳ್ಳುವ ಪವರ್ ಆಫ್ ಅಟಾರ್ನಿಯನ್ನು ಮುರುಘಾ ಮಠದ ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯೂ ಆಗಿರುವ ನಿವೃತ್ತ ನ್ಯಾ.ಎಸ್.ಬಿ.ವಸ್ತ್ರದಮಠ್ ಅವರಿಗೆ ನೀಡಿದ್ದಾರೆ.
ಮುರುಘಾ ಶಿವಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿದ ಬಳಿಕ, ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ನ್ಯಾಯಮೂರ್ತಿ ಎಸ್ ಬಿ ವಸ್ತ್ರದಮಠ್ ಅವರನ್ನು ನೇಮಕ ಮಾಡಲಾಗಿತ್ತು. ಅವರೀಗ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ಬಳಿಕ, ಮುರುಘಾಶ್ರೀಗಳ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯ ಕಾರಣದಿಂದಾಗಿ ವಿವಿಧ ಕೆಲಸ ಕಾರ್ಯಗಳಿಗೆ ತೊಂದರೆ ಉಂಟಾಗಿತ್ತು. ಹೀಗಾಗಿ ಇಂದು ಅಧಿಕೃತವಾಗಿ ಮುರುಘಾ ಶ್ರೀಗಳು ನೋಟರಿ ಮಾಡಿಸಿ, ತಮ್ಮ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯನ್ನು ನಿವೃತ್ತ ನ್ಯಾಯಧೀಶ ಎಸ್ ಬಿ ವಸ್ತ್ರದಮಠ್ ಗೆ ಹಸ್ತಾಂತರಿಸಿದ್ದಾರೆ.